ಬ್ರೇಕಿಂಗ್ ನ್ಯೂಸ್
11-03-25 10:10 pm Mangalore Correspondent ಕರಾವಳಿ
ಮಂಗಳೂರು, ಮಾ.11: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲಿನ ಇಂಜಿನ್ ತಾಂತ್ರಿಕ ವೈಫಲ್ಯದಿಂದ ಕೆಟ್ಟು ಹಳಿಯ ಮಧ್ಯೆ ಬಾಕಿಯಾಗಿದ್ದರಿಂದ ಮಂಗಳವಾರ ಸಂಜೆಯ ವೇಳೆಗೆ ಎರಡು ಗಂಟೆ ಕಾಲ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದರು.
ಮಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಜೋಡಿಸಲು ಯಾರ್ಡ್ ನಿಂದ ಸಂಜೆ ನಾಲ್ಕು ಗಂಟೆಯ ವೇಳೆಗೆ ಇಂಜಿನ್ ತರಿಸಲಾಗಿತ್ತು. ಇಂಜಿನ್ ಸ್ಟೇಶನ್ ಪ್ಲಾಟ್ ಫಾರಂ ಕಡೆಗೆ ಬರುತ್ತಿದ್ದಾಗಲೇ ಹಳಿಯ ಮಧ್ಯೆ ಕೆಟ್ಟು ನಿಂತಿದ್ದರಿಂದ ಹೋಗುವ ಮತ್ತು ಬರುವ ರೈಲುಗಳ ಸಂಚಾರಕ್ಕೆ ತೊಡಕಾಗಿತ್ತು. ಇದರಿಂದಾಗಿ ತಿರುವನಂತಪುರ ಮತ್ತು ಕೊಯಂಬತ್ತೂರಿನಿಂದ ಬಂದಿದ್ದ ರೈಲು ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯಲ್ಲೇ ಬಾಕಿಯಾಗಿದ್ದವು. 4.40 ಮತ್ತು 5.20ಕ್ಕೆ ಬಂದಿದ್ದ ರೈಲುಗಳು ಸ್ಟೇಶನ್ ತಲುಪದೆ ಪ್ರಯಾಣಿಕರು ಎರಡು ಗಂಟೆ ಕಾಲ ರೈಲಿನಲ್ಲೇ ಕುಳಿತು ತೊಂದರೆ ಅನುಭವಿಸಿದರು. ಇತ್ತ ಅವರನ್ನು ಬರಮಾಡಿಕೊಳ್ಳಲು ಬಂದಿದ್ದ ಸಂಬಂಧಿಕರು ಕೂಡ ಕಾದು ಕುಳಿತುಕೊಳ್ಳುವಂತಾಗಿತ್ತು.
ಹಳಿಯಲ್ಲಿ ಇಂಜಿನ್ ಕೆಟ್ಟು ನಿಂತಿದ್ದರಿಂದ ಎಲ್ಲ ರೈಲುಗಳಿಗೂ ರೆಡ್ ಸಿಗ್ನಲ್ ನೀಡಲಾಗಿತ್ತು. ಸಂಜೆ 6.45ಕ್ಕೆ ತಾಂತ್ರಿಕ ಸಮಸ್ಯೆ ಸರಿಯಾಗಿದ್ದು, ಬಳಿಕ ಅರ್ಧಕ್ಕೆ ಉಳಿದಿದ್ದ ರೈಲುಗಳಿಗೆ ಬರುವುದಕ್ಕೆ ಅವಕಾಶ ನೀಡಲಾಯಿತು. ಅಷ್ಟರಲ್ಲಿ ಬಹುತೇಕ ಪ್ರಯಾಣಿಕರು ರೈಲಿನಿಂದ ಇಳಿದು ಹಳಿಯಲ್ಲಿ ನಡೆಯುತ್ತ ಬಂದಿದ್ದರು. ವಯಸ್ಸಾದವರು ಮಾತ್ರ ರೈಲಿನಲ್ಲಿ ಉಳಿದುಕೊಂಡಿದ್ದರು. ಇತ್ತ ಮಂಗಳೂರು ಸೆಂಟ್ರಲ್ ಕಡೆಯಿಂದ ನಿರ್ಗಮಿಸುವ ರೈಲುಗಳೂ ವಿಳಂಬವಾಗಿ ಹೊರಟಿದ್ದು, ರಾತ್ರಿ ಎಂಟು ಗಂಟೆ ವೇಳೆಗೆ ಎಲ್ಲವೂ ಸರಿಯಾಯ್ತು ಎಂದು ರೈಲ್ವೇ ಪಿಆರ್ ಓ ದೇವಾನಂದ್ ತಿಳಿಸಿದ್ದಾರೆ.
Train services at Mangalore Central Railway Station faced disruptions today due to a malfunction in the engine of the Mangalore-Chennai Central train. The incident occurred shortly after the train departed from the yard and was preparing to attach to its bogies.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm