ಬ್ರೇಕಿಂಗ್ ನ್ಯೂಸ್
11-03-25 10:10 pm Mangalore Correspondent ಕರಾವಳಿ
ಮಂಗಳೂರು, ಮಾ.11: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲಿನ ಇಂಜಿನ್ ತಾಂತ್ರಿಕ ವೈಫಲ್ಯದಿಂದ ಕೆಟ್ಟು ಹಳಿಯ ಮಧ್ಯೆ ಬಾಕಿಯಾಗಿದ್ದರಿಂದ ಮಂಗಳವಾರ ಸಂಜೆಯ ವೇಳೆಗೆ ಎರಡು ಗಂಟೆ ಕಾಲ ರೈಲು ಸಂಚಾರ ವ್ಯತ್ಯಯಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದರು.
ಮಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಜೋಡಿಸಲು ಯಾರ್ಡ್ ನಿಂದ ಸಂಜೆ ನಾಲ್ಕು ಗಂಟೆಯ ವೇಳೆಗೆ ಇಂಜಿನ್ ತರಿಸಲಾಗಿತ್ತು. ಇಂಜಿನ್ ಸ್ಟೇಶನ್ ಪ್ಲಾಟ್ ಫಾರಂ ಕಡೆಗೆ ಬರುತ್ತಿದ್ದಾಗಲೇ ಹಳಿಯ ಮಧ್ಯೆ ಕೆಟ್ಟು ನಿಂತಿದ್ದರಿಂದ ಹೋಗುವ ಮತ್ತು ಬರುವ ರೈಲುಗಳ ಸಂಚಾರಕ್ಕೆ ತೊಡಕಾಗಿತ್ತು. ಇದರಿಂದಾಗಿ ತಿರುವನಂತಪುರ ಮತ್ತು ಕೊಯಂಬತ್ತೂರಿನಿಂದ ಬಂದಿದ್ದ ರೈಲು ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯಲ್ಲೇ ಬಾಕಿಯಾಗಿದ್ದವು. 4.40 ಮತ್ತು 5.20ಕ್ಕೆ ಬಂದಿದ್ದ ರೈಲುಗಳು ಸ್ಟೇಶನ್ ತಲುಪದೆ ಪ್ರಯಾಣಿಕರು ಎರಡು ಗಂಟೆ ಕಾಲ ರೈಲಿನಲ್ಲೇ ಕುಳಿತು ತೊಂದರೆ ಅನುಭವಿಸಿದರು. ಇತ್ತ ಅವರನ್ನು ಬರಮಾಡಿಕೊಳ್ಳಲು ಬಂದಿದ್ದ ಸಂಬಂಧಿಕರು ಕೂಡ ಕಾದು ಕುಳಿತುಕೊಳ್ಳುವಂತಾಗಿತ್ತು.
ಹಳಿಯಲ್ಲಿ ಇಂಜಿನ್ ಕೆಟ್ಟು ನಿಂತಿದ್ದರಿಂದ ಎಲ್ಲ ರೈಲುಗಳಿಗೂ ರೆಡ್ ಸಿಗ್ನಲ್ ನೀಡಲಾಗಿತ್ತು. ಸಂಜೆ 6.45ಕ್ಕೆ ತಾಂತ್ರಿಕ ಸಮಸ್ಯೆ ಸರಿಯಾಗಿದ್ದು, ಬಳಿಕ ಅರ್ಧಕ್ಕೆ ಉಳಿದಿದ್ದ ರೈಲುಗಳಿಗೆ ಬರುವುದಕ್ಕೆ ಅವಕಾಶ ನೀಡಲಾಯಿತು. ಅಷ್ಟರಲ್ಲಿ ಬಹುತೇಕ ಪ್ರಯಾಣಿಕರು ರೈಲಿನಿಂದ ಇಳಿದು ಹಳಿಯಲ್ಲಿ ನಡೆಯುತ್ತ ಬಂದಿದ್ದರು. ವಯಸ್ಸಾದವರು ಮಾತ್ರ ರೈಲಿನಲ್ಲಿ ಉಳಿದುಕೊಂಡಿದ್ದರು. ಇತ್ತ ಮಂಗಳೂರು ಸೆಂಟ್ರಲ್ ಕಡೆಯಿಂದ ನಿರ್ಗಮಿಸುವ ರೈಲುಗಳೂ ವಿಳಂಬವಾಗಿ ಹೊರಟಿದ್ದು, ರಾತ್ರಿ ಎಂಟು ಗಂಟೆ ವೇಳೆಗೆ ಎಲ್ಲವೂ ಸರಿಯಾಯ್ತು ಎಂದು ರೈಲ್ವೇ ಪಿಆರ್ ಓ ದೇವಾನಂದ್ ತಿಳಿಸಿದ್ದಾರೆ.
Train services at Mangalore Central Railway Station faced disruptions today due to a malfunction in the engine of the Mangalore-Chennai Central train. The incident occurred shortly after the train departed from the yard and was preparing to attach to its bogies.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm