ಬ್ರೇಕಿಂಗ್ ನ್ಯೂಸ್
09-08-20 11:27 am Mangalore Reporter ಕರಾವಳಿ
ಬಂಟ್ವಾಳ ಆಗಸ್ಟ್ 09: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ಉಕ್ಕಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಿದ್ದರೂ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ನಡುವೆ ಬಂಟ್ವಾಳ ಬಳಿ ನೇತ್ರಾವತಿ ನದಿಯಲ್ಲಿ ಯುವಕರು ಮೋಜು ಮಸ್ತಿಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಸ್ಥಳೀಯ ಯುವಕರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಈಜಾಡಿ ಜಲ ಸಾಹಸ ನಡೆಸಿದ್ದಾರೆ.


ಇಲ್ಲಿಯ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಈ ಯುವಕರು ನದಿಗೆ ದುಮುಕುತ್ತಿದ್ದಾರೆ. ಭಯಹುಟ್ಟಿಸುವ ರೀತಿಯಲ್ಲಿ ಯುವಕರು ನದಿ ನೀರಿಗೆ ಧುಮುಕುವ ಹುಚ್ಚು ಸಾಹಸದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬ್ರಿಟಿಷ್ ಕಾಲದ ಲೋಹದ ಹಳೆ ಸೇತುವೆಯೊಂದು ಪಾಣೆಮಂಗಳೂರಿನಲ್ಲಿದೆ. ಈ ಹಳೇ ಸೇತುವೆಯ ಮೇಲೆ ನಿಂತು ನೇರವಾಗಿ ಅಪಾಯದಮಟ್ಟದಲ್ಲಿ ಹರಿಯುವ ನೇತ್ರಾವತಿ ನದಿ ನೀರಿಗೆ ಈ ಯುವಕರು ಧುಮುಕುತ್ತಿದ್ದಾರೆ. ನದಿಗೆ ಹಾರಿ ಈಜಾಡುವ, ನೀರಾಟ ಆಡುವ ಮೂಲಕ ಸಾಹಸ ಪ್ರದರ್ಶಿಸುವ ದೃಶ್ಯ ವನ್ನು ಮೊಬೈಲ್ ನಲ್ಲಿ ದಾರಿ ಹೋಕ ರೊಬ್ಬರು ಸೆರೆಹಿಡಿದಿದ್ದಾರೆ. ಯುವಕರ ಈ ಹುಚ್ಚಾಟದ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದ್ದು .ಈ ರೀತಿಯ ಹುಚ್ಚಾಟಕ್ಕೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
Video
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm