ಬ್ರೇಕಿಂಗ್ ನ್ಯೂಸ್
12-03-25 06:25 pm Mangalore Correspondent ಕರಾವಳಿ
ಪುತ್ತೂರು, ಮಾ.12 : ಸುಡು ಬಿಸಿಲಿನಿಂದ ಕಂಗೆಟ್ಟಿದ್ದ ಕರಾವಳಿಯ ಕೆಲವು ಕಡೆ ಬೇಸಗೆ ಮಳೆಯಾಗಿದೆ. ಪುತ್ತೂರು ತಾಲೂಕಿನ ಸವಣೂರು, ಸುಳ್ಯ, ಕಡಬ ತಾಲೂಕಿನ ಹಲವೆಡೆ ಮಳೆಯಾಗಿದ್ದು ಸುಟ್ಟು ಹೋಗಿದ್ದ ಇಳೆಗೆ ಮಳೆರಾಯನ ಸಿಂಚನವಾಗಿದೆ.
ಕಳೆದ ಎರಡು ವಾರದಿಂದ ಬಿಸಿಲ ಬೇಗೆ ವಿಪರೀತವಾಗಿ ಏರಿಕೆಯಾಗಿದ್ದು, ಉಷ್ಣಾಂಶ 40 ಸೆಲ್ಸಿಯಸ್ ಗಡಿ ದಾಟಿದೆ. ಮಧ್ಯಾಹ್ನ ವೇಳೆಗೆ ಭಾರೀ ಬಿಸಿಲಿನ ಕಾರಣ ಜನರು ಹೊರಗೆ ಹೋಗದ ಸ್ಥಿತಿಯಾಗಿತ್ತು. ಹಿಂದೆಂದೂ ಕಂಡರಿಯದ ಬಿಸಿಲಿನ ಝಳಕ್ಕೆ ಜನರು ಹೈರಾಣಾಗಿದ್ದರು. ಇದರ ಬೆನ್ನಲೇ ಬುಧವಾರ ಸಂಜೆ ನಾಲ್ಕು ಗಂಟೆ ವೇಳೆಗೆ ಪುತ್ತೂರು, ಸುಳ್ಯ ಆಸುಪಾಸಿನಲ್ಲಿ ಮಳೆ ಸುರಿದಿದ್ದು ಇಳೆಯನ್ನು ತಂಪಾಗಿಸಿದೆ.




ಈ ಹಿಂದೆಲ್ಲ ಮಾರ್ಚ್ ತಿಂಗಳಿನಲ್ಲಿ ಕರಾವಳಿ ಕರ್ನಾಟಕದಲ್ಲಿ ಮಳೆ ಬೀಳುವ ವಾಡಿಕೆ ಇಲ್ಲ. ಆದರೆ ಈ ಬಾರಿ ಕಡಬ, ಸುಳ್ಯ , ಪುತ್ತೂರು ತಾಲೂಕಿನ ಕೆಲವಡೆ ಅರ್ಧ ಗಂಟೆ ಕಾಲ ಮಳೆ ಬಿದ್ದಿದೆ. ಕಡಬ ತಾಲೂಕಿನ ಸವಣೂರು, ಚಾರ್ವಾಕದಲ್ಲಿ ಅರ್ಧ ಗಂಟೆಗೂ ಹೆಚ್ಚು ಮಳೆಯಾಗಿದೆ. ಪುತ್ತೂರು ಪೇಟೆಯಲ್ಲಿ ಹನಿ ಮಳೆಯಾದರೆ ಕೆಲವು ಕಡೆ ಸಿಡಿಲು ಸಹಿತ ಮಳೆಯಾಗಿದೆ. ಗ್ರಾಮೀಣ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.
ದಿಢೀರ್ ಸುರಿದ ಮಳೆಯಿಂದಾಗಿ, ಆಂಗಳದಲ್ಲಿ ಅಡಿಕೆ ಒಣಗಿಸಲು ಹಾಕಿದ ಕೃಷಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಕಾಲಿಕ ಮಳೆ ಗೇರು, ಅಡಿಕೆ ಕೃಷಿಗೆ ಮಾರಕವಾಗಿದ್ದು, ಹಿಂಗಾರದಲ್ಲಿ ನೀರು ನಿಂತರೆ ನಾಳೆಯ ಬಿಸಿಲಿಗೆ ಕರಟಿ ಹೋಗುವ ಸಾಧ್ಯತೆಯಿದೆ. ಎಳೆಯ ಅಡಿಕೆ ಉದುರಿ ಬೀಳುವ ಸಾಧ್ಯತೆ ಇರುತ್ತದೆ.
ಭಾರತೀಯ ಹವಾಮಾನ ಇಲಾಖೆ ಮಾರ್ಚ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಈಗಲೇ ಬಿಸಿಲು ಹೆಚ್ಚಾಗಿರುವುದರಿಂದ ಎಪ್ರಿಲ್ ತಿಂಗಳಿನಲ್ಲಿ ಬಹುತೇಕ ಪೂರ್ವ ಮುಂಗಾರು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಹೆಚ್ಚಾಗಿದೆ.
In a surprising turn of weather, the towns of Sullia and Kadaba in Coastal Karnataka experienced sudden rains, providing much-needed relief from the oppressive heat that has gripped the region in recent days. Residents had been enduring soaring temperatures, with the mercury rising consistently above seasonal norms, leading to discomfort and concerns about health and water scarcity.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm