ಬ್ರೇಕಿಂಗ್ ನ್ಯೂಸ್
13-03-25 08:46 pm Mangalore Correspondent ಕರಾವಳಿ
ಮಂಗಳೂರು, ಮಾ.13 : ದೇಶಾದ್ಯಂತ ನಿಷೇಧಗೊಂಡಿದ್ದ PFI ಸಂಘಟನೆ ಕರಾವಳಿಯಲ್ಲಿ ಮತ್ತೆ ಆ್ಯಕ್ಟಿವ್ ಆಗ್ತಿದೆಯಾ ಎನ್ನುವ ಅನುಮಾನ ಮೂಡಿದೆ. ಇದಕ್ಕೆ ಕಾರಣವಾಗಿರೋದು, ಮಂಗಳೂರಿನಲ್ಲಿ ಪಿಎಫ್ಐ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಮುಖಂಡರಿಗೆ ಪಿಸ್ತೂಲ್ ಪೂರೈಕೆ ಆಗುತ್ತಿರೋದು.
ಮಂಗಳೂರು ಪೊಲೀಸರು ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಭೇದಿಸಿದ್ದು ಪ್ರಕರಣದಲ್ಲಿ ನಿಷೇಧಿತ ಪಿಎಫ್ಐ ನಂಟು ಇರುವುದು ಬೆಳಕಿಗೆ ಬಂದಿದೆ. ಕೇರಳ ಮೂಲದ ನಟೋರಿಯಸ್ ವೆಪನ್ ಡೀಲರ್ ಸೇರಿದಂತೆ ಐವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಕತರ್ನಾಕ್ ಕ್ರಿಮಿನಲ್ ಗಳಾದ ಅಬ್ದುಲ್ ಲತೀಫ್, ಮನ್ಸೂರ್, ನೌಫಾಲ್, ಮಹಮ್ಮದ್ ಅಸ್ಗರ್, ಮಮಹಮ್ಮದ್ ಸಾಲಿ ಎಂಬವರನ್ನು ಬಂಧಿಸಿದ್ದು ಅವರಿಂದ ಮೂರು ಪಿಸ್ತೂಲ್ ಹಾಗೂ ಜೀವಂತ ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ತನಿಖೆ ಸಂದರ್ಭದಲ್ಲಿ ಆರೋಪಿಗಳು ಮುಂಬೈಯಿಂದ ಅಕ್ರಮ ಪಿಸ್ತೂಲ್ ಸರಬರಾಜು ನಡೆಸುತ್ತಿರುವುದು ಬಯಲಾಗಿದೆ. ಇದಲ್ಲದೆ, ಮಂಗಳೂರಿನಲ್ಲಿ ಸಮಾಜ ಘಾತುಕ ಶಕ್ತಿಗಳಿಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿರುವ ವಿಚಾರವೂ ಪತ್ತೆಯಾಗಿದೆ. ಸದ್ಯದ ವಿಚಾರಣೆಯಲ್ಲಿ ಪ್ರಮುಖ ಆರೋಪಿ ಅಬ್ದುಲ್ ಲತೀಫ್ ಯಾನೆ ತೋಕ್ ಲತೀಫ್ ಪಿಎಫ್ ಐ ಮುಖಂಡರಿಗೆ ಪಿಸ್ತೂಲ್ ನೀಡುತ್ತಿರುವುದು ದೃಢಪಟ್ಟಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಎರಡು ತಿಂಗಳ ಹಿಂದೆ ವಾಮಂಜೂರಿನಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಬದ್ರುದ್ದೀನ್ ಮತ್ತು ಇಮ್ರಾನ್ ಎಂಬಿಬ್ಬರನ್ನು ಬಂಧಿಸಲಾಗಿತ್ತು. ಇವರಿಬ್ಬರೂ ನಿಷೇಧಿತ ಪಿಎಫ್ಐ ಸಂಘಟನೆ ಮುಖಂಡರಾಗಿದ್ದರು ಎನ್ನುವ ವಿಚಾರವೂ ತಿಳಿದುಬಂದಿತ್ತು. ಅಂದು ಕಂಕನಾಡಿ ಠಾಣೆಯ ರೌಡಿ ಶೀಟರ್ ಬದ್ರುದ್ದೀನ್ ಯಾನೆ ಅದ್ದು ಎಂಬಾತನ ಕೈಯಲ್ಲಿದ್ದ ಪಿಸ್ತೂಲ್ ನಿಂದ ಹಾರಿದ್ದ ಗುಂಡು ಮುಸ್ಲಿಂ ಧರ್ಮಗುರು ಸಫ್ವಾನ್ ಹೊಟ್ಟೆ ಸೇರಿತ್ತು. ತನಿಖೆ ನಡೆಸಿದಾಗ ರೌಡಿಶೀಟರ್ ಬದ್ರುದ್ದೀನ್ ಗೆ ಇಮ್ರಾನ್ ಎಂಬಾತ ಪಿಸ್ತೂಲ್ ನೀಡಿದ್ದ ಎಂಬುದು ಪತ್ತೆಯಾಗಿತ್ತು.
ಆತನನ್ನು ವಿಚಾರಣೆ ನಡೆಸಿದಾಗ, ಇಮ್ರಾನ್ ಗೆ ಪಿಸ್ತೂಲ್ ಸರಬರಾಜು ಮಾಡಿದ್ದೇ ಕೇರಳ ಮೂಲದ ಅಬ್ದುಲ್ ಲತೀಫ್ ಎಂಬ ವಿಚಾರ ತಿಳಿದುಬಂದಿತ್ತು. ಅದರಂತೆ, ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಇದೀಗ ಅಬ್ದುಲ್ ಲತೀಫ್ ನನ್ನು ತಲಪಾಡಿ ಗಡಿಯಲ್ಲಿ ಬಂಧಿಸಿದ್ದಾರೆ. ಶೂಟೌಟ್ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಸೀದಿ ಗುರು ಸಫ್ವಾನ್ (25) ಕೂಡ ಪಿಎಫ್ಐ ಸಂಘಟನೆ ಸದಸ್ಯನಾಗಿದ್ದ. ಹೀಗಾಗಿ ಅಬ್ದುಲ್ ಲತೀಫ್ ಮತ್ತಿತರರು ಮಂಗಳೂರಿನಲ್ಲಿ ಹಳೆಯ ಪಿಎಫ್ಐ ಪ್ರಮುಖರಿಗೆ ಸದ್ದಿಲ್ಲದೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ.
ಕೇರಳದಲ್ಲಿ ಈ ಹಿಂದೆ ಪಿಎಫ್ಐ ಸಂಘಟನೆ ಬಲವಾಗಿ ಬೇರೂರಿತ್ತು. ಪಿಎಫ್ಐ ಮಾತೃ ಸಂಘಟನೆಯಾಗಿದ್ದರೆ, ಅದರ ರಾಜಕೀಯ ಭಾಗವೇ ಎಸ್ಡಿಪಿಐ ಆಗಿ ಅಲ್ಲಿ ಬೆಳೆದು ಬಂದಿತ್ತು. ಆನಂತರ, ಪಿಎಫ್ಐ ದೇಶ ವಿರೋಧಿ ಚಟುವಟಿಕೆ ಪತ್ತೆಯಾಗಿದ್ದರಿಂದ ಕೇಂದ್ರ ಸರ್ಕಾರ ಅದನ್ನು 2022ರ ಸೆಪ್ಟೆಂಬರ್ ನಲ್ಲಿ ನಿಷೇಧ ಮಾಡಿತ್ತು. ಇದೀಗ ಬಂಧಿತರಾದವರು ಕೇರಳದಲ್ಲಿ ಪಿಎಫ್ಐ ಜೊತೆಗೆ ನೇರ ಸಂಬಂಧ ಹೊಂದಿರುವ ಅನುಮಾನಗಳಿದ್ದು ಕರ್ನಾಟಕ ಕರಾವಳಿಯಲ್ಲು ಮತ್ತೆ ದೇಶ ವಿರೋಧಿ ಚಟುವಟಿಕೆಗೆ ನೀರೆರೆಯುತ್ತಿದ್ದಾರೆಯೇ ಎಂಬ ಶಂಕೆ ಮೂಡಿದೆ.
ಅಬ್ದುಲ್ ಲತೀಫ್ ಮಂಗಳೂರು ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಹಲವೆಡೆ ಪಿಸ್ತೂಲ್ ಸರಬರಾಜು ಮಾಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು ಪ್ರಕರಣದ ಬಗ್ಗೆ ಗಂಭೀರ ತನಿಖೆ ಆರಂಭಿಸಿದ್ದಾರೆ.
Police authorities in Mangalore are grappling with allegations surrounding the banned organization, the Popular Front of India (PFI). Reports have emerged of a potential resurgence of the group, particularly concerning illegal arms supply to its leaders in coastal areas.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm