ಬ್ರೇಕಿಂಗ್ ನ್ಯೂಸ್
13-03-25 09:20 pm Mangalore Correspondent ಕರಾವಳಿ
ಮಂಗಳೂರು, ಮಾ.13 : ನಗರದ ಬಿಜೈ ಕಾಪಿಕಾಡಿನಲ್ಲಿ ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿಯೊಬ್ಬರು ಹಳೆ ದ್ವೇಷದಲ್ಲಿ ನೆರೆಮನೆಯಾತನನ್ನು ಕೊಲ್ಲುವ ಉದ್ದೇಶದಿಂದ ಕಾರನ್ನು ವೇಗವಾಗಿ ಚಲಾಯಿಸಿ ಬೈಕ್ ಮತ್ತು ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿಸಿದ ಘಟನೆ ನಡೆದಿದ್ದು ಕೃತ್ಯದ ವಿಡಿಯೋ ಸೆರೆಯಾಗಿದೆ.
ಬಿಎಸ್ಸೆನ್ನೆಲ್ ಉದ್ಯೋಗಿ ಸತೀಶ್ ಕುಮಾರ್ ಮತ್ತು ಮುರಳಿ ಪ್ರಸಾದ್ ಎಂಬವರು ಅಕ್ಕಪಕ್ಕದ ನಿವಾಸಿಗಳಾಗಿದ್ದು ಯಾವುದೋ ವಿಚಾರಕ್ಕೆ ಜಗಳ ಉಂಟಾಗಿತ್ತು. ಆನಂತರ, ಎಲ್ಲಿ ಸಿಕ್ಕರೂ ಬೈದುಕೊಂಡು ಸಾಗುತ್ತಿದ್ದರು. ಇದೇ ಕೋಪದಲ್ಲಿ ಬೈಕಿನಲ್ಲಿ ಮನೆಯತ್ತ ಬರುತ್ತಿದ್ದ ಮುರಳಿಯನ್ನು ಕೊಲ್ಲುವ ಉದ್ದೇಶದಿಂದ ಸತೀಶ್ ಕುಮಾರ್ ತನ್ನ 800 ಕಾರಿನಲ್ಲಿ ಹಿಂಬದಿಯಿಂದ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು ಡಿಕ್ಕುಪಡಿಸಿದ್ದಾನೆ. ಬಿಜೈ ಆರನೇ ಕ್ರಾಸ್ ನಲ್ಲಿ ಬೈಕ್ ಸವಾರ ಮುಂದಿನಿಂದ ಹೋಗುತ್ತಿದ್ದಾಗ ಅತಿ ವೇಗದಿಂದ ಬಂದ ಕಾರು ಬೈಕಿಗೆ ಡಿಕ್ಕಿಪಡಿಸಿದ್ದಲ್ಲದೆ, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಗೂ ಡಿಕ್ಕಿಯಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಲ್ಲಿ ಬೈಕ್ ಸವಾರ ಮುರುಳಿ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರೆ, ಮಹಿಳೆ ಕಾಂಪೌಂಡ್ ಗೋಡೆಯ ಮೇಲಕ್ಕೆ ಎಸೆಯಲ್ಪಟ್ಟು ತಲೆ ಕೆಳಗಾಗಿ ಸಿಕ್ಕಿಕೊಂಡಿದ್ದಾರೆ. ಆನಂತರ ಸ್ಥಳೀಯ ನಿವಾಸಿಗಳು ಓಡಿ ಬಂದು ಗೋಡೆಯಲ್ಲಿ ಸಿಕ್ಕಿಕೊಂಡಿದ್ದ ಮಹಿಳೆಯನ್ನು ಕೆಳಕ್ಕಿಳಿಸಿ ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಕಾಲಿಗೆ ಗಂಭೀರ ಗಾಯವಾಗಿದೆ.
ಉರ್ವಾ ಪೊಲೀಸರು ಆರೋಪಿ ಸತೀಶ್ ಕುಮಾರ್ ವಿರುದ್ಧ ಕೊಲೆಯತ್ನ ಕೇಸು ದಾಖಲಿಸಿದ್ದು ಬಂಧಿಸಿದ್ದಾರೆ. ಆತನ ಕಾರನ್ನೂ ವಶಕ್ಕೆ ಪಡೆದಿದ್ದಾರೆ. 2023ರಲ್ಲಿ ಮುರುಳಿ ಪ್ರಸಾದ್ ಅವರ ತಂದೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿ ಸತೀಶ್ ತಾಗಿಸಿಕೊಂಡು ಸಾಗಿದ್ದು ಉರ್ವಾದಲ್ಲಿ ಕೇಸು ದಾಖಲಾಗಿತ್ತು. ಇದೀಗ ಕೊಲೆ ಮಾಡುವ ಉದ್ದೇಶದಿಂದ ಮುರುಳಿ ಪ್ರಸಾದ್ ಮೇಲೆ ಕಾರನ್ನು ಡಿಕ್ಕಿಯಾಗಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಮತ್ತು ಪಶ್ಚಿಮ ಸಂಚಾರಿ ಠಾಣೆಯಲ್ಲಿ ಮಹಿಳೆಗೆ ಡಿಕ್ಕಿ ಪಡಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.
#Mangalore #accident at #kapikad, Speeding Car Crashes into Cyclist, Woman Thrown Against Wall in Attempted #Murder Case pic.twitter.com/J3iYReOATK
— Headline Karnataka (@hknewsonline) March 13, 2025
Mangalore accident at kapikad, Speeding Car Crashes into Cyclist, Woman Thrown Against Wall in Attempted Murder Case.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 04:06 pm
Mangalore Correspondent
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am