ಬ್ರೇಕಿಂಗ್ ನ್ಯೂಸ್
14-03-25 11:02 am Mangalore Correspondent ಕರಾವಳಿ
ಉಳ್ಳಾಲ, ಮಾ.14 : ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಮನೆಯ ಶೌಚಾಲಯದಲ್ಲಿ ವಿವೇಕ್ ಅವರು ಬಿದ್ದಿದ್ದರಂತೆ. ಬಳಿಕ ವಿವೇಕ್ ಅವರು ನಿದ್ದೆಗೆ ಜಾರಿ ವಿಶ್ರಾಂತಿ ಪಡೆದಿದ್ದು ಬೆಳಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿದ್ದಾರೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ ಟೆಲಿಫೋನ್ ಎಸ್ ಟಿಡಿ ಬೂತ್ ನಡೆಸುತ್ತಿದ್ದ ವಿವೇಕ್ ಅವರು ಬೂತ್ ಮುಚ್ಚಿದ ಬಳಿಕ ಅಣ್ಣನ ದಿನಸಿ ಅಂಗಡಿಯಲ್ಲೇ ಪ್ಲಾಸ್ಟಿಕ್ ಮನೆ ಬಳಕೆಯ ಸಾಮಾಗ್ರಿಗಳನ್ನ ಮಾರಾಟ ನಡೆಸುತ್ತಿದ್ದರು.

ವೃತ್ತಿಪರ ಹಾಸ್ಯ ಕಲಾವಿದರಾಗಿದ್ದ ವಿವೇಕ್ ಅವರು ಕರಾವಳಿಯ ಹೆಸರಾಂತ ನಾಟಕ ತಂಡಗಳಲ್ಲಿ ಅಭಿನಯಿಸಿದ್ದಲ್ಲದೆ, ತುಳು ಚಿತ್ರಗಳಲ್ಲಿ ಕೋಸ್ಟಲ್ ವುಡ್ ಮೇರು ಕಲಾವಿದರೊಂದಿಗೆ ನಟಿಸಿದ್ದಾರೆ. ತುಳು ನಾಟಕ ಕಲಾವಿದರ ಒಕ್ಕೂಟದಲ್ಲೂ ಅವರು ಸದಸ್ಯರಾಗಿದ್ದರು. ವಿವೇಕ್ ಅವರ ಕಲಾ ಪ್ರಾವೀಣ್ಯತೆಗೆ ಅನೇಕ ಸಂಘ, ಸಂಸ್ಥೆಗಳು ಸನ್ಮಾನಿಸಿ ಗೌರವಿಸಿದೆ. ಅವರ ಅಕಾಲಿಕ ಅಗಲಿಕೆಗೆ ತುಳು ರಂಗಭೂಮಿ, ಕೋಸ್ಟಲ್ ವುಡ್ ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.
Tributes Pour In as Legendary Mangalore tulu Artist Vivek Madur Passes Away from Heart Attack.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm