ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.

ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am