ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.

ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am