ಬ್ರೇಕಿಂಗ್ ನ್ಯೂಸ್
18-12-20 10:56 am Mangalore Correspondent ಕರಾವಳಿ
ಮಂಗಳೂರು, ಡಿ.18 : ಸುರತ್ಕಲ್ ಸಮೀಪದ ಶಿಬರೂರು ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಸರಕಾರದ ಕೊರೊನಾ ನಿಯಮ ಉಲ್ಲಂಘಿಸಿ ಸಂತೆ ವ್ಯಾಪಾರ ನಡೆಸಿದ್ದನ್ನು ವಿರೋಧಿಸಿ ಸುರತ್ಕಲ್ ಪೊಲೀಸರು ಏಕಾಏಕಿ ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ.
ಬುಧವಾರ ಶಿಬರೂರು ಕೊಡಮಣಿಂತ್ತಾಯ ವರ್ಷಾವಧಿ ಉತ್ಸವ ಆರಂಭವಾಗಿದ್ದು, ಸಂತೆ ಇನ್ನಿತರ ಯಾವುದೇ ವ್ಯಾಪಾರಕ್ಕೂ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಆದರೆ, ರಾತ್ರಿ ಸುಮಾರು 8.30 ರ ವೇಳೆಗೆ ದೈವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಕೆಲವರು ಸಂತೆ ವ್ಯಾಪಾರ ಆರಂಭಿಸಿದ್ದು ಏಕಾಏಕಿ ಅಲ್ಲಿಗೆ ಆಗಮಿಸಿದ ಪೊಲೀಸರು ವ್ಯಾಪಾರಿಗಳ ಮೇಲೆ ಲಾಠಿ ಬೀಸಿದ್ದಾರೆ. ಈ ಸಂದರ್ಭ ಸಂತೆ ವ್ಯಾಪಾರಿಗಳು ಎದ್ದು ಬಿದ್ದು ಓಡಿದ್ದು, ಕೆಲವರಿಗೆ ಲಾಟಿ ಏಟು ಬಿದ್ದು ಗಾಯಗಳಾಗಿವೆ.

ದೈವಸ್ಥಾನದ ಎರಡು ಬದಿಯಲ್ಲಿಯೂ ಕೊರೊನಾ ನಿಯಮ ಉಲ್ಲಂಘಿಸಿ ಅನಧಿಕೃತ ಸಂತೆ ವ್ಯಾಪಾರ ನಡೆಸುತ್ತಿರುವವರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಬೆಳಗಿನಿಂದಲೂ ಶಿಬರೂರು ದೈವಸ್ಥಾನಕ್ಕೆ ಬರುವ ರಿಕ್ಷಾ ಪ್ರಯಾಣಿಕರ ಮೇಲೂ ಪೊಲೀಸರು ನಿಗಾ ಇರಿಸಿದ್ದು, ಕಿನ್ನಿಗೋಳಿ ಬಳಿ ಅನೇಕ ರಿಕ್ಷಾ ಚಾಲಕರಿಗೆ ದಂಡ ವಿಧಿಸಲಾಗಿದೆ.
ಶಿಬರೂರು ದೈವಸ್ಥಾನದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ಭಕ್ತಾದಿಗಳು ಸೇರಿದ್ದರೂ, ಪೊಲೀಸರು ಕ್ರಮ ಕೈಗೊಂಡಿಲ್ಲ. ಕೇವಲ ಸಂತೆ ವ್ಯಾಪಾರಸ್ಥರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರ ನಡೆಗೆ ಸಂತೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am