ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm