ಬ್ರೇಕಿಂಗ್ ನ್ಯೂಸ್
14-03-25 10:35 pm Mangalore Correspondent ಕರಾವಳಿ
ಮಂಗಳೂರು, ಮಾ.14 : ಕೇರಳ – ಕರ್ನಾಟಕದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಜೊತೆಗೆ ನಂಟು ಹೊಂದಿರುವ ಐದು ಮಂದಿ ಕ್ರಿಮಿನಲ್ ಗಳನ್ನು ಪೊಲೀಸರು ಬಂಧಿಸಿದ್ದು ಜಿಲ್ಲೆಯಲ್ಲಿ ಆಗುತ್ತಿದ್ದ ಬಹುದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇದಕ್ಕಾಗಿ ಮಂಗಳೂರು ಪೊಲೀಸರನ್ನು ಅಭಿನಂದಿಸುವುದಾಗಿ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಹೇಳಿದ್ದು, ಇದೇ ವೇಳೆ ಆರೋಪಿಗಳ ಪಿಎಫ್ಐ ನಂಟಿನ ಬಗ್ಗೆ ಎನ್ಐಎ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
ಆರೋಪಿಗಳಿಂದ ಪಿಸ್ತೂಲ್ ಗಳನ್ನು ವಶಪಡಿಸಿರುವುದಲ್ಲದೆ, ಪಿಎಫ್ಐನಲ್ಲಿ ಗುರುತಿಸಿಕೊಂಡಿದ್ದವರಿಗೆ ಅದನ್ನು ಮಾರಾಟ ಮಾಡಿರುವುದು ಪತ್ತೆಯಾಗಿದೆ. ಈ ರೀತಿಯ ಬೆಳವಣಿಗೆ ದೇಶದ ಭದ್ರತೆಗೆ ಸವಾಲಾಗಿದ್ದು, ಯಾಕಾಗಿ ಶಸ್ತ್ರಾಸ್ತ್ರ ಶೇಖರಣೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹಿಂದು ನಾಯಕರನ್ನು, ಹಿಂದುಗಳನ್ನು ಗುರಿಯಾಗಿಸಿ ಇವರು ದುಷ್ಕೃತ್ಯಕ್ಕೆ ಸಂಚು ಹೆಣೆದಿರುವ ಸಾಧ್ಯತೆಯಿದ್ದು, ಒಟ್ಟು ಪ್ರಕರಣವನ್ನು ರಾಜ್ಯ ಸರಕಾರ ಎನ್ಐಎ ತನಿಖೆಗೆ ಹಸ್ತಾಂತರಿಸಬೇಕು. ಆರೋಪಿಗಳು ದೇಶದ್ರೋಹಿ ಸಂಘಟನೆ ಜೊತೆಗೆ ನಂಟು ಹೊಂದಿರುವುದಲ್ಲದೆ, ಹಿಂದುಗಳನ್ನು ಗುರಿಯಾಗಿಸಿ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದಾರೆಂಬ ಬಲವಾದ ಶಂಕೆ ಇದೆ.
ಆರೋಪಿಗಳಿಂದ ಐದು ಪಿಸ್ತೂಲ್, ಸಜೀವ ಮದ್ದುಗುಂಡು ಸಹಿತ ಕೆಜಿ ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಿಂದ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಸಕ್ರಿಯವಾಗಿರುವುದು ಮತ್ತು ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಗಲಭೆ ಎಬ್ಬಿಸಲು ಸಂಚು ನಡೆಸುತ್ತಿರುವ ಅನುಮಾನ ವ್ಯಕ್ತವಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉದ್ದೇಶಿಸಿರುವ ಪೂರ್ವಯೋಜಿತ ದುಷ್ಕೃತ್ಯದ ಸತ್ಯಾಸತ್ಯತೆಯನ್ನು ತಿಳಿಯಲು ರಾಷ್ಟ್ರೀಯ ತನಿಖಾ ದಳದಿಂದ ತನಿಖೆಯಾಗಬೇಕು ಎಂದು ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
The Vishwa Hindu Parishad (VHP) has called for a National Investigation Agency (NIA) probe into the pistol case involving leaders of the banned Popular Front of India (PFI) in the coastal region. This appeal comes amid rising concerns about a potential sabotage plot linked to the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm