ಬ್ರೇಕಿಂಗ್ ನ್ಯೂಸ್
15-03-25 01:47 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಕನ್ನಡ, ತುಳು ಭಾಷಾ ಸಾಹಿತ್ಯ ಲೋಕದ ಹಿರಿಯ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ. ವಾಮನ ನಂದಾವರ(81) ನಿಧನರಾಗಿದ್ದಾರೆ. ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು.
ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಮೂಲದ ಇವರು ಕನ್ನಡ ಹಾಗೂ ತುಳು ಭಾಷಾ ಸಾಹಿತ್ಯಕ್ಕೆ ಬಹಳಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಒಂದು ಬಾರಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಬಡ ಕುಟುಂಬದಲ್ಲಿ ಜನಿಸಿದ್ದ ವಾಮನ ನಂದಾವರ ಅವರು ಮುದುಂಗಾರು ಕಟ್ಟೆ ಸರ್ಕಾರಿ ಶಾಲೆ, ಪಾಣೆಮಂಗಳೂರಿನ ಎಸ್.ವಿ.ಎಸ್ ಶಾಲೆ ಹಾಗೂ ಶ್ರೀಭಾರತಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ, ಕುರ್ನಾಡು ಬೋರ್ಡ್ ಹೈಸ್ಕೂಲು, ಕೋಟೆಕಾರಿನ ಆನಂದಾಶ್ರಮ ಪ್ರೌಢಶಾಲೆಗಳಲ್ಲಿ ಪ್ರೌಢಶಿಕ್ಷಣ, ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ, ಮಂಗಳೂರು ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಿ.ಇಡಿ ಪದವಿ ಪಡೆದಿದ್ದರು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂ.ಎ (ಕನ್ನಡ), ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಇಡಿ ಪದವಿ ಪಡೆದಿದ್ದರು.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರೊ. ಬಿ.ಎ.ವಿವೇಕ ರೈ ಮಾರ್ಗದರ್ಶನದಲ್ಲಿ ರಚಿಸಿದ್ದ 'ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪಡೆದಿದ್ದರು. ಬೆಂಗಳೂರಿನ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕರಾಗಿ ಶಿಕ್ಷಣ ವೃತ್ತಿ ಆರಂಭಿಸಿದ್ದ ಅವರು, ಮಂಗಳೂರಿನ ಸೇಂಟ್ ಆನ್ಸ್ ಪ್ರೌಢಶಾಲೆಯಲ್ಲಿ ಸಹಾಯಕ ಅಧ್ಯಾಪಕರಾಗಿ, ಸೇಂಟ್ ಆನ್ಸ್ ಮಹಿಳಾ ಶಿಕ್ಷಕ-ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಹಾಗೂ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ತುಳು, ಕನ್ನಡ ಭಾಷೆಗಳಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ.
ತುಳು ಪಠ್ಯ ಪುಸ್ತಕ ಸಮಿತಿ, ತುಳು ನಿಘಂಟು ಯೋಜನೆಯಲ್ಲಿ ಹಾಗೂ ತುಳು ಜಾನಪದ ಪತ್ರಿಕೆ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು. ಬಂಟ್ವಾಳ ತಾಲ್ಲೂಕಿನ 12ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
Senior Scholar Dr Vamana Nandavar (81), Prominent Figure in Tulu and Kannada Literature, Passes Away in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm