ಬ್ರೇಕಿಂಗ್ ನ್ಯೂಸ್
17-03-25 11:29 am Mangalore Correspondent ಕರಾವಳಿ
ಉಳ್ಳಾಲ, ಮಾ.17 : ವೃದ್ಧ ತಾಯಿ ಜೊತೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ದಿಢೀರ್ ಅಡ್ಡ ಬಂದ ಪರಿಣಾಮ ತಾಯಿ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ.
ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ ಮಾಣೈ (72) ಮೃತ ಮಹಿಳೆ. ವರದರಾಜ್ ಮಾಣೈ ಅವರು ತನ್ನ ತಾಯಿ ದೇವಕಿ ಮಾಣೈ ಅವರನ್ನ ಶನಿವಾರ ರಾತ್ರಿ ಬಜಾಲಿನ ಸಂಬಂಧಿಕರ ಮನೆಯಿಂದ ಸ್ಕೂಟರಿನಲ್ಲಿ ಕುಳ್ಳಿರಿಸಿ ಅಡ್ಯಾರು-ಪಾವೂರು ಮಾರ್ಗವಾಗಿ ಹರೇಕಳದ ಮನೆಗೆ ಮರಳುತ್ತಿದ್ದ ವೇಳೆ ದಾರಿ ಮಧ್ಯದ ಖಂಡಿಗ ಎಂಬಲ್ಲಿ ಹಳೇ ಪಂಚಾಯತ್ ಕಚೇರಿ ಕಟ್ಟಡದ ಬಳಿಯ ಗುಡ್ಡ ಪ್ರದೇಶದಿಂದ ಕಾಡು ಹಂದಿ ದಿಢೀರ್ ಆಗಿ ರಸ್ತೆ ಕಡೆ ಧಾವಿಸಿತ್ತು. ಈ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ವರದರಾಜ್ ಅವರು ವಿಚಲಿತರಾಗಿ ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ತಾಯಿ ಮತ್ತು ಮಗ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ದೇವಕಿ ಅವರಿಗೆ ಹರೇಕಳದ ಕ್ಲಿನಿಕ್ ಒಂದರಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ದೇವಕಿ ಅವರ ಪತಿ ಭೋಜ ಮಾಣೈ ಅವರು ಆರು ತಿಂಗಳ ಹಿಂದೆಯಷ್ಟೇ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದರು. ದೇವಕಿ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ. ಘಟನೆ ಕುರಿತು ದೇವಕಿ ಮಾಣೈ ಅವರ ಅಳಿಯ ರವೀಂದ್ರ ಭಂಡಾರಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tragic Accident in Harekala Mangalore, Wild Boar Leads to Fatal Crash, Claims Life of 72 Year old Woman. The deceased has been identified as Devika. A devastating accident occurred late Saturday night when a man riding a scooter with his elderly mother lost control after a wild boar suddenly crossed their path. The unexpected encounter resulted in the woman being thrown onto the road, leading to a tragic turn of events.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm