ಬ್ರೇಕಿಂಗ್ ನ್ಯೂಸ್
17-03-25 08:01 pm Mangalore Correspondent ಕರಾವಳಿ
ಉಳ್ಳಾಲ, ಮಾ.17 : ಯರ್ರಾಬಿರ್ರಿ ಚಲಿಸಿದ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಾ.ಹೆ. 66ರ ಕಲ್ಲಾಪು ಬಳಿಯ ಆಡಂಕುದ್ರು ಎಂಬಲ್ಲಿ ನೇತ್ರಾವತಿ ನದಿಯ ಹಿನ್ನೀರಿಗೆ ಉರುಳಿ ಬಿದ್ದಿದೆ. ಹೆದ್ದಾರಿ ಬದಿಯಲ್ಲಿದ್ದ ಕಲ್ಲಾಪು ಬುರ್ದುಗೋಳಿ ಗುಳಿಗ-ಕೊರಗಜ್ಜ ಕ್ಷೇತ್ರದ ಸ್ವಾಗತ ಫಲಕದ ಕಮಾನಿಗೆ ಗುದ್ದಿದ ಪರಿಣಾಮ ಕಾರಿನ ವೇಗ ನಿಯಂತ್ರಣಕ್ಕೆ ಬಂದು ಕಾರಿನಲ್ಲಿದ್ದ ಉಳ್ಳಾಲದ ಐವರು ಮುಸ್ಲಿಂ ಹುಡುಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಮಧ್ಯಾಹ್ನದ ವೇಳೆ ಉಳ್ಳಾಲ ಮೂಲದ ಐವರು ಸಣ್ಣ ಪ್ರಾಯದ ಹುಡುಗರಿದ್ದ ಕಾರು ತೊಕ್ಕೊಟ್ಟಿನ ಕಡೆಗೆ ಧಾವಿಸುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯಲ್ಲಿದ್ದ ಬುರ್ದುಗೋಳಿ ಕೊರಗಜ್ಜನ ನಾಮಫಲಕದ ಕಬ್ಬಿಣದ ಕಮಾನಿನ ಸಲಾಕೆಗೆ ಡಿಕ್ಕಿ ಹೊಡೆದು ನದಿಗೆ ಉರುಳಿ ಬಿದ್ದಿದೆ. ಭಯಗೊಂಡ ಹುಡುಗರು ಕಾರಿನಿಂದಿಳಿದು ಅಪಘಾತ ನಡೆದ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆಯಿಂದ ಹೆದ್ದಾರಿ ಸಂಚಾರದಲ್ಲಿ ಸ್ವಲ್ಪ ಹೊತ್ತು ವ್ಯತ್ಯಯ ಉಂಟಾಯಿತು.



ಅಪಘಾತದಿಂದ ಕೊರಗಜ್ಜನ ನಾಮಫಲಕದ ಕಮಾನು ಕೂಡ ಉರುಳಿ ಬಿದ್ದು ಹಾನಿಯುಂಟಾಗಿದೆ. ಕಾರಲ್ಲಿದ್ದ ಇಬ್ಬರು ಹುಡುಗರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ.
ಹುಡುಗರನ್ನ ಓಡಿಸಿದ್ದ ಸ್ಥಳೀಯರು
ಅಪಘಾತಕ್ಕೂ ಮುನ್ನ ಐವರು ಸಣ್ಣ ಪ್ರಾಯದ ಹುಡುಗರಿದ್ದ ಸ್ವಿಫ್ಟ್ ಕಾರು ಅಡಂಕುದ್ರುವಿನ ಒಳ ರಸ್ತೆಯಲ್ಲಿ ಯರ್ರಾಬಿರ್ರಿ ಓಡಾಡಿ, ಗದ್ದಲ ಎಬ್ಬಿಸಿದ್ದು ಸ್ಥಳೀಯ ಕ್ರೈಸ್ತ ನಿವಾಸಿಗಳು ಹುಡುಗರನ್ನ ಬೆನ್ನಟ್ಟಿರುವುದಾಗಿ ಘಟನಾ ಸ್ಥಳಕ್ಕೆ ಬಂದಿದ್ದ ಟ್ರಾಫಿಕ್ ಪೊಲೀಸರಲ್ಲಿ ಸ್ಥಳೀಯರೇ ಮಾಹಿತಿ ನೀಡಿದ್ದಾರೆ. ಕೊರಗಜ್ಜನ ನಾಮಫಲಕ ಇಲ್ಲದೇ ಇರುತ್ತಿದ್ದರೆ ಕಾರು ನೇರ ನದಿ ನೀರಿಗೆ ಬಿದ್ದು ಪ್ರಾಣ ಹಾನಿ ಸಂಭವಿಸುತ್ತಿತ್ತೆಂದು ಟ್ರಾಫಿಕ್ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನದಿಯ ಇಳಿಜಾರಿನಲ್ಲಿ ಉಳಿದಿದ್ದ ಕಾರನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕ್ರೇನ್ ಮುಖಾಂತರ ಮೇಲಕ್ಕೆತ್ತಿ ವಶಕ್ಕೆ ಪಡೆದಿದ್ದು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.
Local Residents Save Five Youths After Car Plunges into Adankadu Netravati Backwaters at kallapu in mangalore
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm