ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:34 pm
Mangalore Correspondent
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm