ಬ್ರೇಕಿಂಗ್ ನ್ಯೂಸ್
17-03-25 11:02 pm Udupi Correspondent ಕರಾವಳಿ
ಉಡುಪಿ, ಮಾ.17 : ಮಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ್ ರೈಲು ಆರಂಭಿಸಬೇಕು ಎಂಬ ಬೇಡಿಕೆ ಈಡೇರುವ ಲಕ್ಷಣ ಇದೆ. ಗೋವಾ - ಮಂಗಳೂರು ನಡುವಿನ ರೈಲನ್ನು ಮುಂಬೈಗೆ ವಿಸ್ತರಣೆ ಮಾಡುವಂತೆ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದು ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸದ್ಯ ಮಂಗಳೂರು ನಗರದಿಂದ ಗೋವಾಕ್ಕೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದೆ. ಈ ರೈಲಿಗೆ ಪ್ರಯಾಣಿಕರ ಕೊರತೆ ಇರುವುದರಿಂದ ಕೇರಳಕ್ಕೆ ವಿಸ್ತರಿಸುವ ಬೇಡಿಕೆ ಇದೆ. ಇದೇ ವೇಳೆ, ಇದೇ ರೈಲನ್ನು ಮಂಗಳೂರು-ಮುಂಬೈ ನಡುವೆ ಸಂಚರಿಸುವಂತೆ ಮಾಡಬೇಕು ಎನ್ನುವ ಬೇಡಿಕೆ ಬಲವಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತು ರೈಲ್ವೇ ಸಚಿವರಿಗೆ ಮನವಿ ನೀಡಿರುವುದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲು ರದ್ದಾಗಬಹುದೆಂಬ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಈ ರೈಲನ್ನು ರದ್ದು ಮಾಡದೇ ಮುಂಬೈ ವರೆಗೆ ವಿಸ್ತರಿಸಿ ಓಡಿಸುವಂತೆ ರೈಲ್ವೇ ಸಚಿವರನ್ನು ಉಡುಪಿ ಸಂಸದರು ಕೋರಿದ್ದಾರೆ. ಸಚಿವರು ತಕ್ಷಣವೇ ಮಂಗಳೂರು- ಮಡಗಾಂವ್ ವಂದೇ ಭಾರತ್ ರೈಲನ್ನು ರದ್ದು ಮಾಡದಂತೆಯೂ ಮತ್ತು ಅದನ್ನು ಮುಂಬಯಿ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು ಎಂದು ಕೋಟ ಶ್ರೀನಿವಾಸ ಪೂಜಾರಿ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಮಂಗಳೂರು- ಉಡುಪಿ ನಗರಗಳ ಹೆಚ್ಚಿನ ಜನರು ಮುಂಬೈನಲ್ಲಿರುವುದು ಮತ್ತು ಈ ಭಾಗದ ಆರ್ಥಿಕ ಆಯಾಮಗಳ ವರದಿಯನ್ನು ಸಚಿವರಿಗೆ ನೀಡಿದ್ದು , ಮುಂಬೈ ವಿಸ್ತರಣೆಯ ಅಗತ್ಯವನ್ನೂ ತಿಳಿಸಿದ್ದಾರೆ. ಇದಲ್ಲದೆ, ಮುಂದೆ ಸ್ಲೀಪರ್ ವಂದೇ ಭಾರತ್ ರೈಲು ಬಿಡುಗಡೆಯಾದಾಗ ಆದ್ಯತೆಯ ಮೇರೆಗೆ ಮಂಗಳೂರು -ಮುಂಬೈ ಮಧ್ಯೆ ಅದನ್ನು ಓಡಿಸುವಂತೆಯೂ ಸಂಸದ ಶ್ರೀನಿವಾಸ ಪೂಜಾರಿ ಅವರು ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.
Mangalore Mumbai Vande Bharat train is imminent, to Railway Minister assures Udupi MP Srinivasa Poojary regarding the request.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm