ಬ್ರೇಕಿಂಗ್ ನ್ಯೂಸ್
19-03-25 10:13 pm Udupi Correspondent ಕರಾವಳಿ
ಉಡುಪಿ, ಮಾ.19 : ಮೀನು ಕದ್ದಿದ್ದಾರೆ ಎಂಬ ಆರೋಪದಲ್ಲಿ ಮಲ್ಪೆ ಮೀನು ಮಾರುಕಟ್ಟೆಯಲ್ಲಿ ಕಾರ್ಮಿಕ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣ ಸಂಬಂಧಿಸಿ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ವಿಜಯನಗರ ಜಿಲ್ಲೆಯ ಮೂಲದ ಮಹಿಳೆಯೊಬ್ಬರು ಬಂದರಿನಲ್ಲಿ ಬೋಟ್ ನಿಂದ ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಸ್ಥಳೀಯರಾದ ಲಕ್ಷ್ಮೀ ಬಾಯಿ ಮತ್ತಿತರರು ಆಕೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲ್ಲೆಗೊಳಗಾದ ಮಹಿಳೆ ಮಾ.18ರಂದು ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಂಧಿತರನ್ನು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ವಿಡಿಯೋದಲ್ಲಿರುವ ಉಳಿದ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ನಡೆಸಿದ್ದು ನಂತರ ಸ್ಥಳೀಯರು ಕಲೆಯೊಂದಿಗೆ ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಘಟನೆ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಡಾ.ಕೆ.ಅರಣ್ ತಿಳಿಸಿದ್ದಾರೆ.
ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ; ಸಿಎಂ
ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದು ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ, ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.
ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ,
ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Udupi Malpe Port Assault, Woman Tied to Pole Over Alleged Theft; Three Arrested, CM Siddaramaiah Initiates Thorough Investigation. Malpe police have arrested Lakshmibai, Sunder, Shilpa, and another individual in connection with the brutal assault on a woman at Malpe port, following allegations of fish theft. Providing details about the incident and legal actions taken, Udupi district police superintendent Dr Arun K stated, "Lakshmibai, Sunder, Shilpa, and another individual have been arrested by Malpe police for assaulting the woman.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm