ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm