ಬ್ರೇಕಿಂಗ್ ನ್ಯೂಸ್
30-03-25 03:07 pm Mangalore Correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ) ಹೆದ್ದಾರಿ ಪ್ರಾಧಿಕಾರದ ವತಿಯಿಂದ ದುರಸ್ತಿ ಕಾಮಗಾರಿ ನಡೆಯುವುದರಿಂದ ಎಪ್ರಿಲ್ 1ರಿಂದ 30ರ ವರೆಗೆ ಸಂಚಾರ ನಿಲುಗಡೆಯಾಗಲಿದೆ.
ಹೀಗಾಗಿ ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ ಸೇತುವೆಯಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪ್ವೆಲ್ ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಗಳಿದ್ದು, ನೇತ್ರಾವತಿ ಸೇತುವೆ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ ಗಳಲ್ಲಿ ಬೇರೆ ಮಾರ್ಗದಲ್ಲಿ ವಾಹನ ಸಂಚಾರವನ್ನು ಮಾಡುವಂತೆ ಪೊಲೀಸ್ ಇಲಾಖೆಯಿಂದ ಕೋರಲಾಗಿದೆ.

ಬದಲಿ ಮಾರ್ಗಕ್ಕೆ ವ್ಯವಸ್ಥೆ
ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು/ದ್ವಿ ಚಕ್ರ ವಾಹನಗಳು ಕೊಣಾಜೆ- ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ.
ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು- ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್ಜ್) ಮುಖಾಂತರ ಸಂಚರಿಸುವುದು.
ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು – ಉಪ್ಪಿನಂಗಡಿ – ಪುತ್ತೂರು - ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು – ಬೋಳಿಯಾರ್ -ಮೆಲ್ಕಾರ್ ಮೂಲಕ ಸಂಚರಿಸುವುದು.
ಬಿ.ಸಿ.ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸಬಹುದು ಎಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
As part of ongoing infrastructure improvements, the Ullal Netravati Bridge will undergo essential repair work from April 1 to April 30. In light of this construction, local authorities are advising motorists to seek alternate routes to ensure smooth traffic flow and minimize delays.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm