ಬ್ರೇಕಿಂಗ್ ನ್ಯೂಸ್
01-04-25 09:12 pm Mangalore Correspondent ಕರಾವಳಿ
ಮಂಗಳೂರು, ಎ.1 : ಮಂಗಳೂರು ನಗರ ಮಧ್ಯದ ಕೊಡಿಯಾಲಬೈಲಿನ ಜೈಲಿನಲ್ಲಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತಲಿನ ಸರಕಾರಿ, ಖಾಸಗಿ ಕಚೇರಿ ಇನ್ನಿತರ ಕೆಲಸ ಮಾಡುತ್ತಿರುವವರು ಮತ್ತು ಇತರ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಾಗಿದೆ. ಇದರ ಬಗ್ಗೆ ಈಗಾಗಲೇ ಬಂಧೀಖಾನೆ ಇಲಾಖೆಯ ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಇನ್ನು ಮೂರು ದಿನ ಸಮಯ ಕೊಡುತ್ತೇವೆ, ಜಾಮರ್ ಯಂತ್ರ ಸರಿಯಾಗದಿದ್ದರೆ ಜೈಲಿನ ಒಳಗೆ ನುಗ್ಗಿ ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಶಾಸಕ ಕಾಮತ್, ಜೈಲಿನಲ್ಲಿ ಸಿಬಂದಿ ಮತ್ತು ಅಧಿಕಾರಿಗಳು ತಮ್ಮ ಕೆಲಸ ಸರಿಯಾಗಿ ಮಾಡಿದರೆ ಕೈದಿಗಳಿಗೆ ಮೊಬೈಲ್ ಹೇಗೆ ಸಿಗುತ್ತದೆ. ಅವರ ಕೈಗೆ ಮೊಬೈಲ್ ಕೊಡುವುದು ಯಾರೆಂದು ಪ್ರಶ್ನೆ ಬರುತ್ತದೆ. ಇವರು ಸರಿಯಾಗಿ ಕೆಲಸ ಮಾಡದಿರುವುದರಿಂದಲೇ ಜಾಮರ್ ಅಳವಡಿಸುವ ಪ್ರಮೇಯ ಬಂದಿದೆ. ಆದರೆ ಯಾವ ಜಾಮರ್ ಇದ್ದರೂ ಅದನ್ನು ಜೈಲಿನ ಒಳಗಡೆ ಸೀಮಿತಗೊಳಿಸಿ, ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಕೊಟ್ಟಿದ್ದೇವೆ. ಜಿಲ್ಲಾಡಳಿತ, ಪೊಲೀಸ್ ಕಮಿಷನರ್ ಅವರಿಗೂ ಮನವಿ ನೀಡಿದ್ದೇವೆ. ರಾಜ್ಯ ಸರಕಾರದ ಉನ್ನತ ಅಧಿಕಾರಿಗಳಿಗೂ ತಿಳಿಸಿದ್ದೇವೆ.
ನಗರ ಮಧ್ಯ ಇರುವ ಜೈಲಿನಲ್ಲಿ ಏಕಾಏಕಿ ಜಾಮರ್ ಅಳವಡಿಸಿ ಜನರಿಗೆ ತೊಂದರೆ ಕೊಡುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ನಾವು ಎಪ್ರಿಲ್ 4ರಂದು ಬಿಜೆಪಿ ಕಾರ್ಯಕರ್ತರು ಸೇರಿಕೊಂಡು ರಾಸ್ತಾರೋಕೊ ನಡೆಸಿ ಜೈಲಿಗೆ ನುಗ್ಗುತ್ತೇವೆ, ಜಾಮರ್ ಯಂತ್ರವನ್ನು ಕಿತ್ತು ಬಿಸಾಕುತ್ತೇವೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕೈದಿಗಳಿಗೆ ಮೊಬೈಲ್ ನೀಡುವುದು, ಅದನ್ನು ಕಂಟ್ರೋಲ್ ಮಾಡಕ್ಕಾಗದ ಸ್ಥಿತಿಯಾಗಿರುವುದಕ್ಕೆ ಕಾಂಗ್ರೆಸ್ ಆಡಳಿತ ಕಾರಣ. ಇವರಿಂದಾಗಿಯೇ ಕೈದಿಗಳು ಜೈಲಿನಲ್ಲಿದ್ದುಕೊಂಡೇ ಮೊಬೈಲ್ ನಲ್ಲಿ ಧಮಕಿ ಹಾಕುವ ಸ್ಥಿತಿ ಬಂದಿದೆ. ಅದನ್ನು ನಿಯಂತ್ರಣ ಮಾಡಲಾಗದ ಅಧಿಕಾರಿ ವರ್ಗ ಈಗ ಜೈಲಿನೊಳಗೆ ಜಾಮರ್ ಹಾಕಿದ್ದಾರೆ ಎಂದು ಕಾಮತ್ ಹೇಳಿದ್ದಾರೆ.
Mangalore MLA Vedavyas Kamath has threatened to demolish the controversial "Jammer" installation following ongoing unresolved issues that have raised significant concerns among prison authorities. The Jammer, intended to block mobile signals within the vicinity of correctional facilities, has become a point of contention amid allegations of ineffective operation and safety concerns.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm