ಬ್ರೇಕಿಂಗ್ ನ್ಯೂಸ್
04-04-25 01:39 pm Mangalore Correspondent ಕರಾವಳಿ
ಪುತ್ತೂರು, ಎ.4 : ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಕಡಬ ತಾಲೂಕಿನ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದ್ದು ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟು 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ರಾತ್ರಿ ಹೊರಟಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್, ಇಂದು ಮುಂಜಾನೆ ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ಬರುತ್ತಿತ್ತು. ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ವಾಹನ ನಿಯಂತ್ರಣ ಕಳೆದುಕೊಂಡಿದ್ದು ತಿರುವಿನಲ್ಲಿ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.




ಮೃತರನ್ನು ಬೆಂಗಳೂರು ಯಡಿಯೂರು ನಿವಾಸಿ ಹರ್ಷ (24) ಎಂದು ಗುರುತಿಸಲಾಗಿದೆ. ಇವರು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಮುಲ್ಕಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ 12 ಮಂದಿಯಲ್ಲಿ 11 ಜನರು ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತದಿಂದಾಗಿ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕ್ರೇನ್ ಸಹಾಯದಿಂದ ಬಸ್ಸನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಲಾಯಿತು.
Mangalore Private bus overturns near Neerakatte Uppinangady, one dead, several injured. A tragic accident occurred early Thursday morning, April 4, near Neerakatte in Bajathur village when a private bus travelling from Bengaluru to Mangaluru overturned, resulting in the death of one passenger and injuries to several others.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm