ಬ್ರೇಕಿಂಗ್ ನ್ಯೂಸ್
05-04-25 01:16 pm Mangaluru Staff ಕರಾವಳಿ
ಮಂಗಳೂರು, ಎ.5: ಮಂಗಳೂರಿನ ಜೈಲು ಆವರಣದಲ್ಲಿ 5ಜಿ ಜಾಮರ್ ಯಂತ್ರ ಅಳವಡಿಸಿ ತೊಂದರೆ ಆಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಜೈಲಿನ ಮುಂದೆ ಪ್ರತಿಭಟನಾ ಸಭೆ ನಡೆಸಿ ಒಳಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು.








ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ, ತೊಂದ್ರೆ ಇಲ್ಲ ಎಂದು ಹೇಳಿದ ಕಾಮತ್, ಜೈಲಿನ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜಾಮರ್ ಅಗತ್ಯವಿದೆಯೇ? ಇವರು ಸರಿಯಾಗಿ ಕೆಲಸ ಮಾಡದ ಕಾರಣಕ್ಕೆ ಜಾಮರ್ ಹಾಕಿದ್ದಾರೆ. ಮೂಗಿನಲ್ಲಿ ನೆಗಡಿ ಆಗಿದೆಯೆಂದು ಮೂಗು ಕತ್ತರಿಸುತ್ತೀರಾ..? ಇದು ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಡೆಯಲ್ಲವೇ ಎಂದು ಪ್ರಶ್ನಿಸಿದರು.
ಪ್ರತಿಭಟನೆ ಸಭೆಯ ಬಳಿಕ ಕಾರ್ಯಕರ್ತರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಜೈಲಿನ ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಮೊದಲೇ ತಯಾರಾಗಿದ್ದ 50ಕ್ಕೂ ಹೆಚ್ಚು ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧನ ಮಾಡಿದ್ದಾರೆ.
MLA Vedavyas Kamath led a protest outside Mangalore Jail today over the installation of jammers within the facility, which have been a controversial topic in recent weeks. The situation intensified when several BJP members, rallying behind Kamath's cause, attempted to enter the jail grounds to demand answers from the authorities regarding the jammers. Law enforcement swiftly intervened, resulting in the detention of the protestors amid escalating tensions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm