ಬ್ರೇಕಿಂಗ್ ನ್ಯೂಸ್
15-04-25 09:21 pm Mangalore Correspondent ಕರಾವಳಿ
ಮಂಗಳೂರು, ಎ.15 : ಸುರತ್ಕಲ್ ನಲ್ಲಿ ನಡೆದ ಮದುವೆಗೆ ಮುಂಬೈನಿಂದ ಬಂದಿದ್ದ ಹತ್ತು ಮಂದಿಯಿದ್ದ ಕುಟುಂಬವೊಂದು ಎನ್ಐಟಿಕೆ ಬಳಿಯ ಬೀಚ್ ಗೆ ತೆರಳಿದ್ದು, ಅಲ್ಲಿ ಸಮುದ್ರದ ಅಲೆಗಳೊಂದಿಗೆ ಈಜಾಡುತ್ತಿದ್ದಾಗ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳು ನೀರಿಗೆ ಬಿದ್ದು ಸಮುದ್ರ ಪಾಲಾಗಿದ್ದಾರೆ.
ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮತ್ತು ಈಚೆಗಷ್ಟೇ ಎಸ್ಎಸ್ಎಲ್ ಸಿ ಮುಗಿಸಿದ್ದ ಹನೀಶ್ ಕುಲಾಲ್ (15) ನೀರುಪಾಲಾದವರು. ಹತ್ತು ಮಂದಿಯ ಕುಟುಂಬ ಸುರತ್ಕಲ್ ಸಮೀಪದ ಸೂರಿಂಜೆಯ ಪ್ರಖ್ಯಾತ್ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ ಎನ್ಐಟಿಕೆ ಬೀಚ್ ಬಳಿಗೆ ಬಂದಿದ್ದು ಸಮುದ್ರದಲ್ಲಿ ನೀರಾಟಕ್ಕಿಳಿದಿದ್ದರು.
ನೀರಿನಲ್ಲಿ ಆಡುತ್ತಿದ್ದಾಗಲೇ ಧ್ಯಾನ್ ಮತ್ತು ಹನೀಶ್ ಕುಲಾಲ್ ನೀರಿನ ಅಲೆಯಲ್ಲಿ ಸಿಲುಕಿದ್ದು, ಈ ವೇಳೆ ಲೈಫ್ ಗಾರ್ಡ್ ಸಿಬಂದಿ ಪ್ರದೀಪ್ ಆಚಾರ್ಯ ಅಲೆಗಳ ಎಡೆಯಿಂದ ಧ್ಯಾನ್ ನನ್ನು ಎಳೆದು ಮೇಲಕ್ಕೆ ತಂದಿದ್ದಾರೆ. ಆದರೆ ಹನೀಶ್ ಕುಲಾಲ್ ಜೀವರಕ್ಷಕ ಸಿಬಂದಿ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಧ್ಯಾನ್ ನನ್ನು ಕೂಡಲೇ ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಧ್ಯಾನ್ ಮುಂಬೈನಲ್ಲಿ ನೆಲೆಸಿರುವ ಬೈಂದೂರು ಮೂಲದ ವಿವೇಕಾನಂದ ಬಂಜನ್ ಅವರ ಪುತ್ರನಾಗಿದ್ದು, ಹನೀಶ್ ಕುಲಾಲ್ ಮುಂಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ಉಮೇಶ್ ಕುಲಾಲ್ ಅವರ ಪುತ್ರನೆಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ. ಹನೀಶ್ ಪತ್ತೆಗಾಗಿ ಲೈಫ್ ಗಾರ್ಡ್ ಸಿಬಂದಿ ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident, two youths from Mumbai drowned at Surathkal Beach in Mangalore. The deceased have been identified as Dhyan, 18, and Hanish Kulal, 15. The unfortunate event occurred while the families were celebrating a wedding function in Surathkal. Following the ceremony, Dhyan and Hanish, along with their family, decided to visit the beach. Witnesses report that the youths were enjoying the water when they encountered difficulties, leading to the tragic drowning.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm