ಬ್ರೇಕಿಂಗ್ ನ್ಯೂಸ್
19-12-20 01:27 pm Mangalore Correspondent ಕರಾವಳಿ
ಉಳ್ಳಾಲ, ಡಿ.19: ನಗರೋತ್ಥಾನ ಯೋಜನೆಯಡಿ ಸುಮಾರು ಒಂದು ಕೋಟಿ ರೂ. ಅನುದಾನದಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಗೊಳ್ಳಲಿದ್ದು ಮಾಜಿ ಸಚಿವ ಯು.ಟಿ ಖಾದರ್ ನೂತನ ಮಾರುಕಟ್ಟೆ ಕಾಮಗಾರಿಗೆ ಶಿಲಾನ್ಯಾಸ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ತೊಕ್ಕೊಟ್ಟಿನ ಹೃದಯಭಾಗ ಒಳಪೇಟೆಯನ್ನು ಅಭಿವೃದ್ಧಿ ಪಡಿಸಲು ನಗರೋತ್ಥಾನ ಯೋಜನೆಯಡಿ ದೊಡ್ಡ ಮೊತ್ತದ ಅನುದಾನ ವ್ಯಯಿಸಲಾಗುತ್ತಿದೆ. ಸುಸಜ್ಜಿತ ಹಾಗೂ ಮಾದರಿಯಾದ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ತೊಕ್ಕೊಟ್ಟು ಒಳಪೇಟೆಯ ನಾಗರಿಕರು, ವರ್ತಕರ ಸಹಕಾರ ಇದಕ್ಕೆ ಅಗತ್ಯ.
ಅಂಬೇಡ್ಕರ್ ಮೈದಾನ ಅಭಿವೃದ್ಧಿಗೂ ಒಂದು ಕೋಟಿ ಹತ್ತು ಲಕ್ಷ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಮೈದಾನವನ್ನು ಯಾವ ರೀತಿ ಅಭಿವೃದ್ಧಿ ಪಡಿಸಬೇಕೆಂದು ಚರ್ಚಿಸಿ ರೂಪುರೇಷೆ ಸಿದ್ಧಪಡಿಸಲಾಗುವುದು. ಒಳಪೇಟೆ ಜಂಕ್ಷನ್ ಅನ್ನು ಅಭಿವೃದ್ಧಿ ಪಡಿಸುವ ಯೋಜನೆ ಇದೆ ಎಂದರು.
ಉಳ್ಳಾಲ ನಗರಸಭೆ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷರಾದ ಅಯೂಬ್ ಮಂಚಿಲ, ಸದಸ್ಯರಾದ ಭಾಝಿಲ್ ಡಿ ಸೋಜ, ಭಾರತಿ, ಸಪ್ನಾ ಹರೀಶ್, ಶಶಿಕಲಾ, ಗೀತಾ ಬಾಯಿ, ರವಿಚಂದ್ರ ಗಟ್ಟಿ, ಇಸ್ಮಾಯಿಲ್, ಮಾಜಿ ಸದಸ್ಯರಾದ ಕಿಶೋರ್ ತೊಕ್ಕೊಟ್ಟು, ವರ್ತಕರಾದ ಮೆಹರಾಜ್ ಲತೀಫ್ ಮೊದಲಾದವರು ಇದ್ದರು.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm