ಬ್ರೇಕಿಂಗ್ ನ್ಯೂಸ್
19-04-25 10:51 am Mangalore Correspondent ಕರಾವಳಿ
ಮಂಗಳೂರು, ಎ.19: ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ, ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲದಲ್ಲಿ ವಿಜೃಂಭಣೆಯಿಂದ ವಾರ್ಷಿಕ ಉತ್ಸವದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ನಸುಕಿನ 2 ಗಂಟೆ ವೇಳೆಗೆ ರಥೋತ್ಸವ ನಡೆಯುತ್ತಿದ್ದಾಗ ಮೇಲ್ಭಾಗದ ತೇರು ಉರುಳಿ ನೆಲಕ್ಕೆ ಬಿದ್ದಿದೆ.
ದೇವಸ್ಥಾನ ಸುತ್ತ ಆವರಣದಲ್ಲಿ ದೇವರ ಹೆಸರಲ್ಲಿ ಘೋಷಣೆ ಕೂಗುತ್ತ ರಥ ಎಳೆಯುತ್ತಿದ್ದಾಗಲೇ ಮೇಲ್ಭಾಗದ ತೇರು ನೆಲಕ್ಕೆ ಉರುಳಿ ಬಿದ್ದಿದೆ. ರಥೋತ್ಸವ ನಡೆಯುತ್ತಿದ್ದಾಗ ಸ್ಥಳದಲ್ಲಿ ಸಾವಿರಾರು ಜನರು ಸೇರಿದ್ದರೂ ಅಪಾಯ ಉಂಟಾಗಿಲ್ಲ. ರಥ ಒಂದು ಕಡೆಗೆ ವಾಲುತ್ತಿದ್ದಂತೆ ಅಲ್ಲಿದ್ದವರು ಮತ್ತೊಂದು ಕಡೆಗೆ ಓಡಿದ್ದಾರೆ. ಈ ವೇಳೆ, ರಥದಲ್ಲಿ ದೇವರ ಜೊತೆ ಅರ್ಚಕರಿದ್ದರೂ ಯಾವುದೇ ತೊಂದರೆಯಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ರಥೋತ್ಸವ ನೆಲಕ್ಕೆ ಉರುಳಿ ಬೀಳುತ್ತಿದ್ದಂತೆ ಸೇರಿದ್ದ ಜನರು ದಿಗ್ಭ್ರಾಂತರಾಗಿದ್ದು ಭಯಗೊಂಡಿದ್ದಾರೆ. ಆದರೆ ಯಾವುದೇ ಅಪಾಯ ಆಗದೇ ಇದ್ದುದರಿಂದ ಮತ್ತು ರಥವನ್ನು ಎಳೆಯುವಾಗ ತಿರುವಿನಲ್ಲಿ ವೇಗ ಕಡಿಮೆಗೊಳಿಸದೆ ಎಳೆದಿದ್ದರಿಂದ ಮೇಲ್ಭಾಗದ ತೇರು ಉರುಳಿ ಬಿದ್ದಿದೆ ಎನ್ನಲಾಗಿದೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಬಪ್ಪನಾಡಿನಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿದ್ದು ರಥ ಉರುಳಿ ಬಿದ್ದರೂ ಉತ್ಸವ ನಿಲ್ಲಿಸದೆ ಆನಂತರ ಚಂದ್ರಮಂಡಲ ರಥೋತ್ಸವ ಮಾಡಿದ್ದಾರೆ.
The upper deck of the renowned #Bappanadu chariot at #Mulki collapsed during the annual chariot festival. Fortunately, swift reactions and a stroke of luck allowed attendees to escape the incident with only minor injuries #Mangalore pic.twitter.com/D0BHQl8v3s
— Headline Karnataka (@hknewsonline) April 19, 2025
The upper deck of the renowned Bappanadu chariot at Mulki collapsed during the annual chariot festival here today, leaving devotees in a state of disbelief. Fortunately, swift reactions and a stroke of luck allowed attendees to escape the incident with only minor injuries reported.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm