ಬ್ರೇಕಿಂಗ್ ನ್ಯೂಸ್
19-12-20 03:58 pm Mangalore Correspondent ಕರಾವಳಿ
ಮುಲ್ಕಿ, ಡಿ.19: ಇಲ್ಲಿನ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಅದೇ ಬಲೆಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮುಲ್ಕಿ ಬಳಿಯ ಕಕ್ವ ನಿವಾಸಿ ವಿಜಯ್ ಫುರ್ಟಾಡೋ(47) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅವರು ಕೊಕ್ರಾಣಿಯ ಶಾಂಭವಿ ನದಿ ತೀರದಲ್ಲಿ ಮೀನು ಹಿಡಿಯಲು ಬಲೆ ಹಾಕಿದ್ದರು. ರಾತ್ರಿ 10ರ ಸುಮಾರಿಗೆ ಪರಿಶೀಲಿಸಲು ತೆರಳಿದಾಗ, ಬಲೆಯೊಳಗೆ ಸಿಲುಕಿ ಮೃತಪಟ್ಟಿದ್ದಾರೆ.
ನದಿ ತೀರಕ್ಕೆ ತೆರಳಿದ ವಿಜಯ್ ಮನೆ ಕಡೆ ಬಾರದ್ದರಿಂದ ತಾಯಿ ಆತಂಕಗೊಂಡು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಕಾರ್ನಾಡು ಆಪತ್ಪಾಂಧವ ಆಸೀಫ್ ಅವರ ನೆರವಿನಿಂದ ರಾತ್ರೋರಾತ್ರಿ ಶವವನ್ನು ಮೇಲೆತ್ತಿದ್ದಾರೆ.
ಮೃತ ವಿಜಯ್ ಅವರು ದುಬೈನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದು ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದರು.
ಮುಲ್ಕಿಯ ವಿಜಯಾ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದ ಅವರು ಕ್ರಿಕೆಟ್, ವಾಲಿಬಾಲ್ ನಲ್ಲಿ ಪ್ರತಿಭಾವಂತರಾಗಿದ್ದರು. ವಿಜಯ್ ಅವರು ತಾಯಿ, ಪತ್ನಿ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm