ಬ್ರೇಕಿಂಗ್ ನ್ಯೂಸ್
19-12-20 03:58 pm Mangalore Correspondent ಕರಾವಳಿ
ಮುಲ್ಕಿ, ಡಿ.19: ಇಲ್ಲಿನ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಅದೇ ಬಲೆಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮುಲ್ಕಿ ಬಳಿಯ ಕಕ್ವ ನಿವಾಸಿ ವಿಜಯ್ ಫುರ್ಟಾಡೋ(47) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅವರು ಕೊಕ್ರಾಣಿಯ ಶಾಂಭವಿ ನದಿ ತೀರದಲ್ಲಿ ಮೀನು ಹಿಡಿಯಲು ಬಲೆ ಹಾಕಿದ್ದರು. ರಾತ್ರಿ 10ರ ಸುಮಾರಿಗೆ ಪರಿಶೀಲಿಸಲು ತೆರಳಿದಾಗ, ಬಲೆಯೊಳಗೆ ಸಿಲುಕಿ ಮೃತಪಟ್ಟಿದ್ದಾರೆ.
ನದಿ ತೀರಕ್ಕೆ ತೆರಳಿದ ವಿಜಯ್ ಮನೆ ಕಡೆ ಬಾರದ್ದರಿಂದ ತಾಯಿ ಆತಂಕಗೊಂಡು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಕಾರ್ನಾಡು ಆಪತ್ಪಾಂಧವ ಆಸೀಫ್ ಅವರ ನೆರವಿನಿಂದ ರಾತ್ರೋರಾತ್ರಿ ಶವವನ್ನು ಮೇಲೆತ್ತಿದ್ದಾರೆ.
ಮೃತ ವಿಜಯ್ ಅವರು ದುಬೈನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದು ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದರು.
ಮುಲ್ಕಿಯ ವಿಜಯಾ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದ ಅವರು ಕ್ರಿಕೆಟ್, ವಾಲಿಬಾಲ್ ನಲ್ಲಿ ಪ್ರತಿಭಾವಂತರಾಗಿದ್ದರು. ವಿಜಯ್ ಅವರು ತಾಯಿ, ಪತ್ನಿ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm