ಬ್ರೇಕಿಂಗ್ ನ್ಯೂಸ್
19-12-20 03:58 pm Mangalore Correspondent ಕರಾವಳಿ
ಮುಲ್ಕಿ, ಡಿ.19: ಇಲ್ಲಿನ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಅದೇ ಬಲೆಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮುಲ್ಕಿ ಬಳಿಯ ಕಕ್ವ ನಿವಾಸಿ ವಿಜಯ್ ಫುರ್ಟಾಡೋ(47) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅವರು ಕೊಕ್ರಾಣಿಯ ಶಾಂಭವಿ ನದಿ ತೀರದಲ್ಲಿ ಮೀನು ಹಿಡಿಯಲು ಬಲೆ ಹಾಕಿದ್ದರು. ರಾತ್ರಿ 10ರ ಸುಮಾರಿಗೆ ಪರಿಶೀಲಿಸಲು ತೆರಳಿದಾಗ, ಬಲೆಯೊಳಗೆ ಸಿಲುಕಿ ಮೃತಪಟ್ಟಿದ್ದಾರೆ.
ನದಿ ತೀರಕ್ಕೆ ತೆರಳಿದ ವಿಜಯ್ ಮನೆ ಕಡೆ ಬಾರದ್ದರಿಂದ ತಾಯಿ ಆತಂಕಗೊಂಡು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಕಾರ್ನಾಡು ಆಪತ್ಪಾಂಧವ ಆಸೀಫ್ ಅವರ ನೆರವಿನಿಂದ ರಾತ್ರೋರಾತ್ರಿ ಶವವನ್ನು ಮೇಲೆತ್ತಿದ್ದಾರೆ.
ಮೃತ ವಿಜಯ್ ಅವರು ದುಬೈನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದು ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದರು.
ಮುಲ್ಕಿಯ ವಿಜಯಾ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದ ಅವರು ಕ್ರಿಕೆಟ್, ವಾಲಿಬಾಲ್ ನಲ್ಲಿ ಪ್ರತಿಭಾವಂತರಾಗಿದ್ದರು. ವಿಜಯ್ ಅವರು ತಾಯಿ, ಪತ್ನಿ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am