ಬ್ರೇಕಿಂಗ್ ನ್ಯೂಸ್
27-04-25 05:28 pm Mangalore Correspondent ಕರಾವಳಿ
ಮಂಗಳೂರು, ಎ.27 : ಇತ್ತೀಚೆಗೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಕ್ರಮ ತೀವ್ರ ವಿವಾದಕ್ಕೆ ಒಳಗಾಗಿತ್ತು. ಇದೀಗ ಅಂತಹದ್ದೇ ಆದೇಶ ರೈಲ್ವೇ ಇಲಾಖೆಯ ನೇಮಕಾತಿ ಪರೀಕ್ಷೆಗೂ ಕಾಣಿಸಿಕೊಂಡಿದ್ದು ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು ಎಂದು ಪ್ರವೇಶ ಪತ್ರದಲ್ಲಿ ನಮೂದಿಸಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಇದೇ ಎಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು ಮಂಗಳೂರಿನಲ್ಲಿ ಬೋಂದೆಲ್ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ಪರೀಕ್ಷಾ ಕೇಂದ್ರ ಇದೆ. ಪರೀಕ್ಷೆ ಬರೆಯುವ ಮೊದಲು ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳಸೂತ್ರ, ಕಾಲುಂಗುರ, ತಿಲಕ, ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.



ಈ ಬಗ್ಗೆ ವಿಶ್ವ ಹಿಂದು ಪರಿಷತ್ ಆಕ್ಷೇಪಿಸಿದ್ದು ಈ ರೀತಿಯ ಆದೇಶ ಸರಿಯಲ್ಲ. ಇತ್ತೀಚಿಗೆ CET ಪರೀಕ್ಷೆ ಬರೆಯುವ ಸಂಧರ್ಭದಲ್ಲಿ ಹಿಂದೂಗಳ ಪವಿತ್ರ ಜನಿವಾರವನ್ನು ಕಿತ್ತು ಹಾಕಿರುವುದು ಹಿಂದೂಗಳ ಭಾವನೆಗೆ ದಕ್ಕೆಯಾಗಿದ್ದು, ಇಡೀ ದೇಶದ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಜನಿವಾರವನ್ನು ಕಿತ್ತು ಹಾಕುವಂತೆ ಹೇಳುವುದು ಕೋಟ್ಯಂತರ ಹಿಂದೂ ಧರ್ಮೀಯರ ಧಾರ್ಮಿಕ ಭಾವನೆಗೆ ನೋವು ತಂದಂತಾಗುತ್ತದೆ. ಹಿಂದೂ ಬಹುಸಂಖ್ಯಾತ ನಮ್ಮ ದೇಶದಲ್ಲಿ ಈ ರೀತಿಯ ಹಿಂದೂ ವಿರೋಧಿ ಧೋರಣೆ ಸಹಿಸಲು ಅಸಾಧ್ಯ. ಹಾಗಾಗಿ ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತೇವೆ ಎಂದು ವಿಹಿಂಪ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಪ್ರದೀಪ್ ಸರಿಪಲ್ಲ ಹೇಳಿಕೆಯಲ್ಲಿ ತಿಳಿಸಿದ್ದಾರೆ.
A recent directive issued during the Railway Recruitment Board (RRB) examination has sparked controversy, after candidates were reportedly asked to remove religious symbols such as mangalsutra (sacred thread worn by married women), tilak (forehead mark), and janivara (sacred thread worn by Brahmin men) before entering the examination hall.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm