ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm