ಬ್ರೇಕಿಂಗ್ ನ್ಯೂಸ್
19-12-20 05:49 pm Mangalore Correspondent ಕರಾವಳಿ
ಮಂಗಳೂರು, ಡಿ.19: ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣ ಸಂಬಂಧಿಸಿ, ಸದ್ಯಕ್ಕೆ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಆರು ಜನರು ಕೃತ್ಯದಲ್ಲಿ ಭಾಗಿಯಾಗಿದ್ದು ಇವರಿಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆ ಇದ್ದಾನೆ. ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.
ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲಿ ಭೇದಿಸಿದ ಹುಮ್ಮಸ್ಸಿನಲ್ಲಿದ್ದ ಎಸ್ಪಿ ಲಕ್ಷ್ಮೀಪ್ರಸಾದ್, ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಮೊದಲೇ ಮನೆಯವರಿಂದ ಮಾಹಿತಿ ಪಡೆದಿದ್ದೆವು. ಈ ವೇಳೆ, ಸಿಕ್ಕ ಮಾಹಿತಿ ಮತ್ತು ನಾವು ಸಂಗ್ರಹಿಸಿದ ಮಾಹಿತಿ ಆಧರಿಸಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದು ಚಿಕ್ಕಮಗಳೂರಿನ ಮೂಡಿಗೆರೆ, ಮಂಡ್ಯ ಜಿಲ್ಲೆಯ ಮಧುಗಿರಿ, ಹಾಸನ, ಬೆಂಗಳೂರಿಗೆ ತೆರಳಿತ್ತು. ಮಧುಗಿರಿಗೆ ತೆರಳಿದ್ದ ತಂಡಕ್ಕೆ ಒಂದಷ್ಟು ಮಾಹಿತಿಗಳು ಸಿಕ್ಕಿದ್ದವು ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಬೇವಿನಹಳ್ಳಿ ಗ್ರಾಮದ ದೇವಲಕೆರೆಯ ರಂಜಿತ್ (22), ಕೆ.ಎಂ.ದೊಡ್ಡಿ ಸಮೀಪದ ಕೋಡಿಕೆರೆ ಗ್ರಾಮದ ಹನುಮಂತು(21), ಮೈಸೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ತಲಕಾಡು ಗ್ರಾಮದ ಗಂಗಾಧರ (25), ಬೆಂಗಳೂರಿನ ದೊಡ್ಡಮ್ಮನ ಹಳ್ಳ 2ನೇ ಕ್ರಾಸ್ ನಿವಾಸಿ ಕಮಲ್(22) ಎಂಬ ನಾಲ್ವರನ್ನು ಪ್ರಮುಖ ಆರೋಪಿ ಬಾಡಿಗೆಗೆ ಪಡೆದು, ಸ್ಕೆಚ್ ರೂಪಿಸಿದ್ದ. ಅದಕ್ಕಾಗಿ ಏಳು ಲಕ್ಷ ರೂ. ನೀಡುವುದಾಗಿ ಹೇಳಿದ್ದ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಹೇಶ್ ಆರೋಪಿಗಳಿಗೆ ಸಹಕರಿಸಿದ್ದರು. ಉಜಿರೆಯಿಂದ ನೇರವಾಗಿ ಸುಳ್ಯ, ಮಡಿಕೇರಿ, ಹಾಸನ ಮಾರ್ಗವಾಗಿ ಬೆಂಗಳೂರಿಗೆ ಹೋಗಿ ಕೋಲಾರದತ್ತ ಹೋಗಿದ್ದಾರೆ. ಈ ನಡುವೆ, ಎಲ್ಲಿಯೂ ನಿಲ್ಲಿಸದೆ ಪ್ರಯಾಣ ಮಾಡಿದ್ದಾರೆ. ಕೋಲಾರಕ್ಕೆ ಹೋಗಿದ್ದ ವೇಳೆ ಖಚಿತ ಮಾಹಿತಿ ಪಡೆದು ಅಲ್ಲಿನ ಸ್ಥಳೀಯ ಪೊಲೀಸರ ನೆರವು ಪಡೆದು ಬಂಧನ ಕಾರ್ಯಾಚರಣೆ ಮಾಡಿದ್ದೇವೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಬಿಟ್ ಕಾಯಿನ್ ವ್ಯವಹಾರ ಹೊಂದಿದ್ದ
ಬಾಲಕನ ತಂದೆ, ಬಿಜೋಯ್ ನಾಲ್ಕು ವರ್ಷಗಳ ಹಿಂದೆ ಬಿಟ್ ಕಾಯಿನ್ ಖರೀದಿಸಿದ್ದರು. ಆದರೆ, ಆಬಳಿಕ ಮೌಲ್ಯ ಕುಸಿಯುತ್ತದೆ ಎಂದು ಮಾರಾಟ ಮಾಡಿದ್ದಾಗಿ ತಿಳಿಸಿದ್ದಾರೆ. ಈಗ ನಾಪತ್ತೆಯಾಗಿರುವ ಪ್ರಮುಖ ಆರೋಪಿಗೆ ಬಿಜೋಯ್ ಕುಟುಂಬದ ಬಗ್ಗೆ ಗೊತ್ತಿದೆ. ಆತನೇ ಅಪಹರಣದ ಪ್ಲಾನ್ ಮಾಡಿದ್ದು. ಇದಕ್ಕಾಗಿ ಡಿ.7ರಿಂದಲೇ ಆರೋಪಿಗಳನ್ನು ಉಜಿರೆಗೆ ಕಳಿಸಿ, ಕುಟುಂಬಸ್ಥರ ಚಲನವಲನಗಳನ್ನು ಗಮನಿಸುತ್ತಿದ್ದ ಎಂದು ಎಸ್ಪಿ ಹೇಳಿದರು.

ಮಾಹಿತಿ ಪ್ರಕಾರ, ಬಿಜೋಯ್ ಬಿಟ್ ಕಾಯಿನ್ ವಹಿವಾಟು ನಡೆಸುತ್ತಿದ್ದಾರೆ. ಈ ಬಗ್ಗೆ ಗೊತ್ತಿದ್ದ ವ್ಯಕ್ತಿಯೇ ಬಿಜೋಯ್ ಬಳಿಯಿಂದ ಹಣ ಕೀಳುವುದಕ್ಕೆ ಪ್ಲಾನ್ ಮಾಡಿದ್ದಾನೆ. ಬಿಟ್ ಕಾಯಿನ್ ಮೌಲ್ಯ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದರಿಂದ ಒಂದಷ್ಟು ಪೀಕಿಸುವ ಪ್ಲಾನ್ ಹಾಕಿ, ಫೈಲ್ ಆಗಿದ್ದಾನೆ. ಆ ವ್ಯಕ್ತಿ ಯಾರೆನ್ನುವ ಬಗ್ಗೆ ಸ್ಪಷ್ಟ ಸುಳಿವು ಪೊಲೀಸರಿಗೆ ಲಭಿಸಿದ್ದು, ಈಗಾಗ್ಲೇ ಆತನ ಹಿಂದೆ ಬಿದ್ದಿದ್ದಾರೆ. ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸದಲ್ಲಿದ್ದಾರೆ.
Six persons have been arrested in Kidnap case of young boy from Ujre, Mangalore. One Master mind is said to be absconding said SP.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm