ಬ್ರೇಕಿಂಗ್ ನ್ಯೂಸ್
19-12-20 05:49 pm Mangalore Correspondent ಕರಾವಳಿ
ಮಂಗಳೂರು, ಡಿ.19: ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣ ಸಂಬಂಧಿಸಿ, ಸದ್ಯಕ್ಕೆ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಆರು ಜನರು ಕೃತ್ಯದಲ್ಲಿ ಭಾಗಿಯಾಗಿದ್ದು ಇವರಿಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆ ಇದ್ದಾನೆ. ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.
ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲಿ ಭೇದಿಸಿದ ಹುಮ್ಮಸ್ಸಿನಲ್ಲಿದ್ದ ಎಸ್ಪಿ ಲಕ್ಷ್ಮೀಪ್ರಸಾದ್, ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಮೊದಲೇ ಮನೆಯವರಿಂದ ಮಾಹಿತಿ ಪಡೆದಿದ್ದೆವು. ಈ ವೇಳೆ, ಸಿಕ್ಕ ಮಾಹಿತಿ ಮತ್ತು ನಾವು ಸಂಗ್ರಹಿಸಿದ ಮಾಹಿತಿ ಆಧರಿಸಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದು ಚಿಕ್ಕಮಗಳೂರಿನ ಮೂಡಿಗೆರೆ, ಮಂಡ್ಯ ಜಿಲ್ಲೆಯ ಮಧುಗಿರಿ, ಹಾಸನ, ಬೆಂಗಳೂರಿಗೆ ತೆರಳಿತ್ತು. ಮಧುಗಿರಿಗೆ ತೆರಳಿದ್ದ ತಂಡಕ್ಕೆ ಒಂದಷ್ಟು ಮಾಹಿತಿಗಳು ಸಿಕ್ಕಿದ್ದವು ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಬೇವಿನಹಳ್ಳಿ ಗ್ರಾಮದ ದೇವಲಕೆರೆಯ ರಂಜಿತ್ (22), ಕೆ.ಎಂ.ದೊಡ್ಡಿ ಸಮೀಪದ ಕೋಡಿಕೆರೆ ಗ್ರಾಮದ ಹನುಮಂತು(21), ಮೈಸೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ತಲಕಾಡು ಗ್ರಾಮದ ಗಂಗಾಧರ (25), ಬೆಂಗಳೂರಿನ ದೊಡ್ಡಮ್ಮನ ಹಳ್ಳ 2ನೇ ಕ್ರಾಸ್ ನಿವಾಸಿ ಕಮಲ್(22) ಎಂಬ ನಾಲ್ವರನ್ನು ಪ್ರಮುಖ ಆರೋಪಿ ಬಾಡಿಗೆಗೆ ಪಡೆದು, ಸ್ಕೆಚ್ ರೂಪಿಸಿದ್ದ. ಅದಕ್ಕಾಗಿ ಏಳು ಲಕ್ಷ ರೂ. ನೀಡುವುದಾಗಿ ಹೇಳಿದ್ದ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಹೇಶ್ ಆರೋಪಿಗಳಿಗೆ ಸಹಕರಿಸಿದ್ದರು. ಉಜಿರೆಯಿಂದ ನೇರವಾಗಿ ಸುಳ್ಯ, ಮಡಿಕೇರಿ, ಹಾಸನ ಮಾರ್ಗವಾಗಿ ಬೆಂಗಳೂರಿಗೆ ಹೋಗಿ ಕೋಲಾರದತ್ತ ಹೋಗಿದ್ದಾರೆ. ಈ ನಡುವೆ, ಎಲ್ಲಿಯೂ ನಿಲ್ಲಿಸದೆ ಪ್ರಯಾಣ ಮಾಡಿದ್ದಾರೆ. ಕೋಲಾರಕ್ಕೆ ಹೋಗಿದ್ದ ವೇಳೆ ಖಚಿತ ಮಾಹಿತಿ ಪಡೆದು ಅಲ್ಲಿನ ಸ್ಥಳೀಯ ಪೊಲೀಸರ ನೆರವು ಪಡೆದು ಬಂಧನ ಕಾರ್ಯಾಚರಣೆ ಮಾಡಿದ್ದೇವೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಬಿಟ್ ಕಾಯಿನ್ ವ್ಯವಹಾರ ಹೊಂದಿದ್ದ
ಬಾಲಕನ ತಂದೆ, ಬಿಜೋಯ್ ನಾಲ್ಕು ವರ್ಷಗಳ ಹಿಂದೆ ಬಿಟ್ ಕಾಯಿನ್ ಖರೀದಿಸಿದ್ದರು. ಆದರೆ, ಆಬಳಿಕ ಮೌಲ್ಯ ಕುಸಿಯುತ್ತದೆ ಎಂದು ಮಾರಾಟ ಮಾಡಿದ್ದಾಗಿ ತಿಳಿಸಿದ್ದಾರೆ. ಈಗ ನಾಪತ್ತೆಯಾಗಿರುವ ಪ್ರಮುಖ ಆರೋಪಿಗೆ ಬಿಜೋಯ್ ಕುಟುಂಬದ ಬಗ್ಗೆ ಗೊತ್ತಿದೆ. ಆತನೇ ಅಪಹರಣದ ಪ್ಲಾನ್ ಮಾಡಿದ್ದು. ಇದಕ್ಕಾಗಿ ಡಿ.7ರಿಂದಲೇ ಆರೋಪಿಗಳನ್ನು ಉಜಿರೆಗೆ ಕಳಿಸಿ, ಕುಟುಂಬಸ್ಥರ ಚಲನವಲನಗಳನ್ನು ಗಮನಿಸುತ್ತಿದ್ದ ಎಂದು ಎಸ್ಪಿ ಹೇಳಿದರು.
ಮಾಹಿತಿ ಪ್ರಕಾರ, ಬಿಜೋಯ್ ಬಿಟ್ ಕಾಯಿನ್ ವಹಿವಾಟು ನಡೆಸುತ್ತಿದ್ದಾರೆ. ಈ ಬಗ್ಗೆ ಗೊತ್ತಿದ್ದ ವ್ಯಕ್ತಿಯೇ ಬಿಜೋಯ್ ಬಳಿಯಿಂದ ಹಣ ಕೀಳುವುದಕ್ಕೆ ಪ್ಲಾನ್ ಮಾಡಿದ್ದಾನೆ. ಬಿಟ್ ಕಾಯಿನ್ ಮೌಲ್ಯ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದರಿಂದ ಒಂದಷ್ಟು ಪೀಕಿಸುವ ಪ್ಲಾನ್ ಹಾಕಿ, ಫೈಲ್ ಆಗಿದ್ದಾನೆ. ಆ ವ್ಯಕ್ತಿ ಯಾರೆನ್ನುವ ಬಗ್ಗೆ ಸ್ಪಷ್ಟ ಸುಳಿವು ಪೊಲೀಸರಿಗೆ ಲಭಿಸಿದ್ದು, ಈಗಾಗ್ಲೇ ಆತನ ಹಿಂದೆ ಬಿದ್ದಿದ್ದಾರೆ. ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸದಲ್ಲಿದ್ದಾರೆ.
Six persons have been arrested in Kidnap case of young boy from Ujre, Mangalore. One Master mind is said to be absconding said SP.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm