ಬ್ರೇಕಿಂಗ್ ನ್ಯೂಸ್
29-04-25 05:45 pm Mangalore Correspondent ಕರಾವಳಿ
ಮಂಗಳೂರು, ಎ.29 : ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ವಾಹನ ಸಂಚಾರ ಮುಕ್ತಗೊಳಿಸಲು ಇನ್ನೆರಡು ದಿನ ಕಾಯಬೇಕಾಗಿದೆ. ಎಪ್ರಿಲ್ 1ರಿಂದ 30ರ ವರೆಗೆ ಒಂದು ಬದಿಯ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ನಡೆಸಲಾಗಿತ್ತು. ಇದೀಗ ದುರಸ್ತಿ ಕಾರ್ಯ ಮುಗಿದಿದ್ದು, ಮೇ 3ರಂದು ಬೆಳಗ್ಗಿನಿಂದ ಸಂಪೂರ್ಣ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೈವೇ ಅಧಿಕಾರಿಗಳು ತಿಳಿಸಿದ್ದಾರೆ.
ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ಬರುವ ಸೇತುವೆಯಲ್ಲಿ ಒಟ್ಟು 24 ಪಿಲ್ಲರ್ ಗಳಿದ್ದು 12 ಕಡೆಗಳಲ್ಲಿ ಬೇರಿಂಗ್ ಅಳವಡಿಸಲಾಗಿದೆ. ಬೇರಿಂಗ್ ಅಳವಡಿಸುವುದು ಸೂಕ್ಷ್ಮ ಕೆಲಸವಾಗಿದ್ದು, ಪಿಲ್ಲರ್ ಕಂಬದ ಮೇಲ್ಭಾಗದಲ್ಲಿ ಹೋಗಿ ಇಬ್ಬರಿಗಷ್ಟೇ ದುರಸ್ತಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹಾಗಾಗಿ ಒಂದು ತಿಂಗಳು ಸಮಯ ಬೇಕಾಯಿತು. ಕೊನೆಯ ಬೇರಿಂಗ್ ಎಪ್ರಿಲ್ 28ರಂದು ಅಳವಡಿಸಲಾಗಿದ್ದು, ಅದರ ಕ್ಯೂರಿಂಗ್ ಆಗಲು ನಾಲ್ಕು ದಿನ ಬೇಕಾಗುತ್ತದೆ. ಅದಕ್ಕಾಗಿ ಸಂಚಾರ ಸ್ಥಗಿತ ಆದೇಶ ಎರಡು ದಿನ ವಿಸ್ತರಿಸಲು ಜಿಲ್ಲಾಧಿಕಾರಿಗೆ ಬರೆದಿದ್ದು ಅನುಮತಿ ನೀಡಿದ್ದಾರೆ. ಮೇ 2ರಂದು ಸಂಜೆಯ ವೇಳೆಗೆ ಸಂಚಾರಕ್ಕೆ ಮುಕ್ತಗೊಳಿಸುತ್ತಿದ್ದು, 3ರಿಂದ ಪೂರ್ತಿಯಾಗಿ ಮುಕ್ತ ಮಾಡುತ್ತೇವೆ ಎಂದು ಕಾಮಗಾರಿ ನಿರ್ವಹಿಸಿದ ಮುಂಬೈ ಮೂಲದ ಕಂಪನಿಯ ಇಂಜಿನಿಯರ್ ಅಜಯ್ ಮಾಹಿತಿ ನೀಡಿದ್ದಾರೆ.
ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆಗಳಿದ್ದು, ಒಂದರಲ್ಲಿ ದುರಸ್ತಿ ಕಾರ್ಯ ಇದ್ದುದರಿಂದ ಎಪ್ರಿಲ್ ತಿಂಗಳು ಪೂರ್ತಿಯಾಗಿ ಸಂಚಾರ ಬಂದ್ ಮಾಡಲಾಗಿತ್ತು. ಹೀಗಾಗಿ ಒಂದೇ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ಟ್ರಾಫಿಕ್ ಜಾಮ್ ನೊಂದಿಗೆ ಸಾಗಬೇಕಾಗಿತ್ತು. ಇದರಿಂದಾಗಿ ತುರ್ತಾಗಿ ಸಂಚರಿಸಬೇಕಿದ್ದವರು ತುಂಬಾನೇ ಪ್ರಯಾಸ ಪಟ್ಟಿದ್ದರು. ಇದೀಗ ಎಪ್ರಿಲ್ 30ರ ಗಡುವು ಮತ್ತೆರಡು ದಿನಕ್ಕೆ ವಿಸ್ತರಣೆಯಾಗಿದ್ದು, ಮೇ 3ರ ವೇಳೆಗೆ ವಾಹನ ಸಂಚಾರಕ್ಕೆ ಅನುಮತಿ ಸಿಗುವ ನಿರೀಕ್ಷೆಯಿದೆ.
The much-awaited Ullal Nethravathi Bridge is set to be inaugurated on May 3, bringing relief to commuters traveling between Mangaluru and Ullal. The district administration has granted a two-day extension to the project contractor to complete the final touches before the official opening.
12-07-25 07:07 pm
Bangalore Correspondent
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
12-07-25 01:42 pm
Mangalore Correspondent
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
12-07-25 01:32 pm
HK News Desk
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm