ಬ್ರೇಕಿಂಗ್ ನ್ಯೂಸ್
29-04-25 05:45 pm Mangalore Correspondent ಕರಾವಳಿ
ಮಂಗಳೂರು, ಎ.29 : ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ವಾಹನ ಸಂಚಾರ ಮುಕ್ತಗೊಳಿಸಲು ಇನ್ನೆರಡು ದಿನ ಕಾಯಬೇಕಾಗಿದೆ. ಎಪ್ರಿಲ್ 1ರಿಂದ 30ರ ವರೆಗೆ ಒಂದು ಬದಿಯ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ನಡೆಸಲಾಗಿತ್ತು. ಇದೀಗ ದುರಸ್ತಿ ಕಾರ್ಯ ಮುಗಿದಿದ್ದು, ಮೇ 3ರಂದು ಬೆಳಗ್ಗಿನಿಂದ ಸಂಪೂರ್ಣ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೈವೇ ಅಧಿಕಾರಿಗಳು ತಿಳಿಸಿದ್ದಾರೆ.
ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ಬರುವ ಸೇತುವೆಯಲ್ಲಿ ಒಟ್ಟು 24 ಪಿಲ್ಲರ್ ಗಳಿದ್ದು 12 ಕಡೆಗಳಲ್ಲಿ ಬೇರಿಂಗ್ ಅಳವಡಿಸಲಾಗಿದೆ. ಬೇರಿಂಗ್ ಅಳವಡಿಸುವುದು ಸೂಕ್ಷ್ಮ ಕೆಲಸವಾಗಿದ್ದು, ಪಿಲ್ಲರ್ ಕಂಬದ ಮೇಲ್ಭಾಗದಲ್ಲಿ ಹೋಗಿ ಇಬ್ಬರಿಗಷ್ಟೇ ದುರಸ್ತಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹಾಗಾಗಿ ಒಂದು ತಿಂಗಳು ಸಮಯ ಬೇಕಾಯಿತು. ಕೊನೆಯ ಬೇರಿಂಗ್ ಎಪ್ರಿಲ್ 28ರಂದು ಅಳವಡಿಸಲಾಗಿದ್ದು, ಅದರ ಕ್ಯೂರಿಂಗ್ ಆಗಲು ನಾಲ್ಕು ದಿನ ಬೇಕಾಗುತ್ತದೆ. ಅದಕ್ಕಾಗಿ ಸಂಚಾರ ಸ್ಥಗಿತ ಆದೇಶ ಎರಡು ದಿನ ವಿಸ್ತರಿಸಲು ಜಿಲ್ಲಾಧಿಕಾರಿಗೆ ಬರೆದಿದ್ದು ಅನುಮತಿ ನೀಡಿದ್ದಾರೆ. ಮೇ 2ರಂದು ಸಂಜೆಯ ವೇಳೆಗೆ ಸಂಚಾರಕ್ಕೆ ಮುಕ್ತಗೊಳಿಸುತ್ತಿದ್ದು, 3ರಿಂದ ಪೂರ್ತಿಯಾಗಿ ಮುಕ್ತ ಮಾಡುತ್ತೇವೆ ಎಂದು ಕಾಮಗಾರಿ ನಿರ್ವಹಿಸಿದ ಮುಂಬೈ ಮೂಲದ ಕಂಪನಿಯ ಇಂಜಿನಿಯರ್ ಅಜಯ್ ಮಾಹಿತಿ ನೀಡಿದ್ದಾರೆ.
ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆಗಳಿದ್ದು, ಒಂದರಲ್ಲಿ ದುರಸ್ತಿ ಕಾರ್ಯ ಇದ್ದುದರಿಂದ ಎಪ್ರಿಲ್ ತಿಂಗಳು ಪೂರ್ತಿಯಾಗಿ ಸಂಚಾರ ಬಂದ್ ಮಾಡಲಾಗಿತ್ತು. ಹೀಗಾಗಿ ಒಂದೇ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ಟ್ರಾಫಿಕ್ ಜಾಮ್ ನೊಂದಿಗೆ ಸಾಗಬೇಕಾಗಿತ್ತು. ಇದರಿಂದಾಗಿ ತುರ್ತಾಗಿ ಸಂಚರಿಸಬೇಕಿದ್ದವರು ತುಂಬಾನೇ ಪ್ರಯಾಸ ಪಟ್ಟಿದ್ದರು. ಇದೀಗ ಎಪ್ರಿಲ್ 30ರ ಗಡುವು ಮತ್ತೆರಡು ದಿನಕ್ಕೆ ವಿಸ್ತರಣೆಯಾಗಿದ್ದು, ಮೇ 3ರ ವೇಳೆಗೆ ವಾಹನ ಸಂಚಾರಕ್ಕೆ ಅನುಮತಿ ಸಿಗುವ ನಿರೀಕ್ಷೆಯಿದೆ.
The much-awaited Ullal Nethravathi Bridge is set to be inaugurated on May 3, bringing relief to commuters traveling between Mangaluru and Ullal. The district administration has granted a two-day extension to the project contractor to complete the final touches before the official opening.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm