ಬ್ರೇಕಿಂಗ್ ನ್ಯೂಸ್
30-04-25 11:26 am Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಬಳಿಯಲ್ಲಿ ಯುವಕರ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಯುವಕನ ಗುರುತು ಪತ್ತೆಯಾಗಿದ್ದು ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು ಯುವಕನ ಗುರುತು ಪತ್ತೆಗಾಗಿ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣ ಸಂಬಂಧಿಸಿ ಈಗಾಗಲೇ 15 ಜನರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್, ಆದರ್ಶ್ ಬಂಧಿತರು.
ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಯುವಕನೆಂದು ಧರ್ಮ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆದರೆ ಸಾವಿಗೀಡಾದ ವ್ಯಕ್ತಿ ಯಾರೆಂದೇ ಗುರುತು ಸಿಕ್ಕಿರಲಿಲ್ಲ. ಸ್ಥಳೀಯ ಪೊಲೀಸರು ಹೇಳದಿದ್ದರೂ, ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ ಜೊಂದಾಬಾದ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ನಡೆಸಿದ್ದರು ಎಂದಿದ್ದಾರೆ. ಹೀಗಾಗಿ ಮುಸ್ಲಿಂ ಎನ್ನುವುದಕ್ಕಿಂತಲೂ ದೇಶಕ್ಕೆ ವಿರುದ್ಧವಾಗಿ ಘೋಷಣೆ ಹಾಕಿದ್ದಕ್ಕಾಗಿ ಯುವಕರು ಹಲ್ಲೆ ನಡೆಸಿದ್ದರೆಂಬುದು ಕಂಡುಬರುತ್ತದೆ.
Kudupu Mob Lynching Murder Case, Five More Arrested for Assault Over Alleged Anti National Slogans.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm