ಬ್ರೇಕಿಂಗ್ ನ್ಯೂಸ್
30-04-25 04:06 pm Mangalore Correspondent ಕರಾವಳಿ
ಮಂಗಳೂರು, ಎ.30 : ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯತೆಯ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮೊನ್ನೆಯ ಕುಡುಪು ಘಟನೆ ಇದರ ಒಂದು ಭಾಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಯುವಕನ ಕೊಲೆ ಸಂಬಂಧ ಈಗಾಗಲೇ ಮಂಗಳೂರು ಪೊಲೀಸರು ಶೀಘ್ರ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಕೆಲವು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು ಅವರ ಹೆಡೆಮುರಿ ಕಟ್ಟುವುದು ಖಂಡಿತ.
ಕೊಲೆ ಪ್ರಕರಣವನ್ನು ತ್ವರಿತವಾಗಿ ಬೇಧಿಸಿ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಜಿಲ್ಲೆಯ ಸೌರ್ಹಾದತೆ ಕಾಪಾಡುವುದು ಪೊಲೀಸರ ಜವಾಬ್ದಾರಿ. ಈ ಘಟನೆಯ ಬಳಿಕ ಕೆಲ ಸಮಾಜಘಾತಕ ಶಕ್ತಿಗಳು ದ್ವೇಷ ಹರಡುವ ಪ್ರಯತ್ನ ನಡೆಸುವ ಸಾಧ್ಯತೆಯಿದೆ. ಪೊಲೀಸರು ಅದಕ್ಕೆ ಅವಕಾಶ ಕೊಡಬಾರದು.
ಕೋಮು ಸಂಘರ್ಷ ಹುಟ್ಟು ಹಾಕುವ ಮೂಲಕ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆನ್ನುವುದು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಉದ್ದೇಶವಾಗಿದೆ. ದಕ್ಷಿಣ ಕನ್ನಡದ ಜನ ಈ ಹುನ್ನಾರಗಳನ್ನು ಅರಿಯಬೇಕು. ಪ್ರಜ್ಞಾವಂತರ ಜಿಲ್ಲೆ ಎಂದೇ ಹೆಸರಾದ ದಕ್ಷಿಣ ಕನ್ನಡಕ್ಕೆ ಕಳಂಕ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಕಾನೂನು ಕೈಗೆತ್ತಿಕೊಳ್ಳುವ, ಸಮಾಜದ ಸ್ವಾಸ್ಥ್ಯ ಕೆಡಿಸುವ, ಸಾಮರಸ್ಯಕ್ಕೆ ಕೊಳ್ಳಿ ಇಡುವ ಯಾವುದೇ ದುಷ್ಟ ಪ್ರಯತ್ನಕ್ಕೆ ನಮ್ಮ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ. ಈ ವಿಚಾರದಲ್ಲಿ ನಮ್ಮದು ಶೂನ್ಯ ಸಹಿಷ್ಣುತೆ ಎಂಬ ಮಾತನ್ನು ಸಮಾಜ ಘಾತಕರಿಗೆ ಎಚ್ಚರಿಕೆ ರೂಪದಲ್ಲಿ ಹೇಳಲು ಬಯಸುತ್ತೇನೆ.
ದಯೆಗಿಂತ ಮಿಗಿಲಾದ ಧರ್ಮವಿಲ್ಲ ಎಂಬ ಬಸವಣ್ಣನವರ ಆಶಯದಂತೆ ನಮ್ಮ ಸರ್ಕಾರ ಆಡಳಿತ ನಡೆಸುತ್ತಿದೆ. ಈ ಆಶಯಕ್ಕೆ ಧಕ್ಕೆ ಬರಬಾರದು. ಸಮಾಜದ ಶಾಂತಿ ಕದಡಬಾರದು. ಇದು ನನ್ನ ಮನವಿ ಎಂದು ಕುಡುಪು ಗುಂಪು ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
Dakshina Kannada district in-charge minister Dinesh Gundu Rao has strongly condemned the barbaric murder of a youth who was bludgeoned with a stone near Kudupu on the city outskirts.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm