ಬ್ರೇಕಿಂಗ್ ನ್ಯೂಸ್
05-05-25 05:10 pm Mangalore Correspondent ಕರಾವಳಿ
ಮಂಗಳೂರು, ಮೇ 5 : ರಿವರ್ಸ್ ಲವ್ ಜಿಹಾದಿಗೆ ಒಳಗಾದವರು ದಿನೇಶ್ ಗುಂಡೂರಾವ್. ಒಬ್ಬ ಬುರ್ಖಾಧಾರಿ ಮಹಿಳೆಯಿಂದ ಲವ್ ಜಿಹಾದಿಗೆ ಒಳಗಾದ ಮನುಷ್ಯ. ಹಾಗಾಗಿ ಅವರಿಗೆ ಹಿಂದುಗಳ ಬಗ್ಗೆ ಶ್ರದ್ಧೆ ಇಲ್ಲ. ಮುಸ್ಲಿಮರ ಮೇಲೆ ಪ್ರೀತಿ ಇದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ತಿರುಗೇಟು ನೀಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವಾಗಿ ಮುಸ್ಲಿಂ ಹುಡುಗರು ಹಿಂದು ಹುಡುಗಿಯರನ್ನು ಬ್ಲಾಕ್ಮೇಲ್ ಮಾಡಿ ಮದುವೆಯಾಗುತ್ತಾರೆ. ದಿನೇಶ್ ಗುಂಡೂರಾವ್ ಉಲ್ಟಾ ಲವ್ ಜಿಹಾದಿಗೆ ಒಳಗಾದವರು. ಹಾಗಾಗಿ, ಅವರಿಗೆ ಹಿಂದುಗಳ ಬಗ್ಗೆ, ಹಿಂದು ಶ್ರದ್ಧಾಬಿಂದುಗಳ ಬಗ್ಗೆ ನಂಬಿಕೆ ಇಲ್ಲ. ಹಿಂದುಗಳ ಬಗ್ಗೆ ತಾತ್ಸಾರ ಭಾವನೆ ಇದೆ, ಮುಸ್ಲಿಮರ ಮೇಲೆ ಪ್ರೀತಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ತಿಳಿದುಕೊಂಡು ಅವರು ಮಾತನಾಡಲಿ ಎಂದು ಟಾಂಗ್ ನೀಡಿದ್ದಾರೆ.
ನನ್ನ ಬಗ್ಗೆ ಸೀರಿಯಲ್ ಒಫೆಂಡರ್ ಅಂತ ಗುಂಡೂರಾವ್ ಹೇಳುತ್ತಾರೆ. ಹಿಂದು ಸಮಾಜಕ್ಕಾಗಿ ಎಷ್ಟು ಕೇಸು ಹಾಕಿದರೂ ತೊಂದರೆ ಇಲ್ಲ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಒಂಬತ್ತು ಕೇಸನ್ನು ಹಾಕಿದೆ, ಎದುರಿಸುತ್ತಿದ್ದೇನೆ. ತೆಕ್ಕಾರಿನಲ್ಲಿ ಹಿಂದು ಸಮಾಜದ ಜಾಗೃತಿಗಾಗಿ ಮಾತನಾಡಿದ್ದೇನೆ. ಪೊಲೀಸರು ಎಫ್ಐಆರ್ ಮಾಡಿದ್ದಾರೆ. ನನ್ನ ಮಾತನ್ನು ಹಿಂದು ಸಮಾಜ ಒಪ್ಪಿಕೊಂಡಿದೆ. ಬೇರೆಯವರ ಸರ್ಟಿಫಿಕೇಟ್ ನನಗೆ ಬೇಕಾಗಿಲ್ಲ ಎಂದರು.
ನನ್ನನ್ನು ಕ್ಷೇತ್ರದ ಎರಡು ಲಕ್ಷ ಜನರು ಮತ ಕೊಟ್ಟು ಆಯ್ಕೆ ಮಾಡಿದ್ದಾರೆ. ಕಾಂಗ್ರೆಸಿಗರು ಹಕ್ಕುಚ್ಯುತಿ ದೂರು ಕೊಟ್ಟಿದ್ದಾರೆ, ಹಿಂದು ಸಮಾಜಕ್ಕಾಗಿ ಶಾಸಕ ಸ್ಥಾನ ಹೋದರೂ ಚಿಂತೆ ಇಲ್ಲ. ನಾನು ಸಮಾಜದ ಪರ ನಿಲ್ಲುತ್ತೇನೆ ಎಂದು ಮಂಗಳೂರಿನಲ್ಲಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಹರೀಶ್ ಪೂಂಜ, ಮುಸ್ಲಿಮರ ಬಗ್ಗೆ ಅಪಮಾನಕರ ಮಾತು ಆಡಿರುವ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Dinesh Gundu Rao a Victim of Reverse Love Jihad by a Burqa Clad Woman, Claims MLA Harish Poonja, Says He’s in Love with Muslims.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm