ಬ್ರೇಕಿಂಗ್ ನ್ಯೂಸ್
06-05-25 06:17 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ ಎನ್ನುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿ ವಿರುದ್ಧ ಬಿಜೆಪಿ ಸರ್ಕಾರ ಇದ್ದಾಗ ಹೊರಡಿಸಿದ್ದ ರೌಡಿಶೀಟ್ ಆದೇಶದ ಪ್ರತಿಯನ್ನು ಟ್ವಿಟರ್ ನಲ್ಲಿ ಹಾಕಿದ್ದಾರೆ.
ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ. ಇಂದು ಸುಹಾಸ್ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.
ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೇ..?
ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.
The political atmosphere heated up on Monday as the district's Minister-in-Charge launched a sharp attack on the BJP, accusing it of criminalizing youth and branding innocent individuals as rowdies for political gain.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm