ಬ್ರೇಕಿಂಗ್ ನ್ಯೂಸ್
07-05-25 02:36 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಸುಹಾಸ್ ಶೆಟ್ಟಿ ಒಬ್ಬ ಹಿಂದು ಸಂಘಟನೆ ಕಾರ್ಯಕರ್ತ. ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಆತನನ್ನು ಕೇವಲ ರೌಡಿಶೀಟರ್ ಎನ್ನುವ ಮೂಲಕ ಕೀಳು ಮಟ್ಟಕ್ಕಿಳಿಸುತ್ತಿದ್ದಾರೆ. ಹಿಂದುತ್ವಕ್ಕಾಗಿ ಕೆಲಸ ಮಾಡಿದ್ದಕ್ಕೆ ಪೊಲೀಸರು ರೌಡಿ ಪಟ್ಟ ನೀಡಿದ್ದರು. ಅಂಥ ವ್ಯಕ್ತಿಯನ್ನು ಕಾಂಗ್ರೆಸ್ ಸರಕಾರ ನೀಡಿದ್ದ ಪರಿಹಾರದ ಹಣದಿಂದಲೇ ಫಾಜಿಲ್ ಕುಟುಂಬ ಕೊಲೆ ಮಾಡಿಸಿದೆ. ಸರಕಾರ ಕೂಡಲೇ ಈ ಹಣವನ್ನು ವಾಪಸ್ ಪಡೆಯಬೇಕು ಎಂದು ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಕುಟುಂಬ ಹಿಂದಿನಿಂದಲೂ ಕಾಂಗ್ರೆಸ್ ಪರವಾಗಿದ್ದವರು. ಆದರೆ ಕಾಂಗ್ರೆಸ್ ನಾಯಕರು ಆತ ಹಿಂದುತ್ವವಾದಿ ಎನ್ನುವ ಕಾರಣಕ್ಕೆ ಹತ್ತಿರ ಹೋಗಿಲ್ಲ. ಕಾಂಗ್ರೆಸಿಗರಿಗೆ ಕೇವಲ ಮುಸ್ಲಿಮರು ಮಾತ್ರ ಬೇಕು, ಹಿಂದುಗಳು ಬೇಕಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಿಂದು, ಮುಸ್ಲಿಮರು, ಕ್ರೈಸ್ತರು ಎಲ್ಲರೂ ಮತ ಹಾಕಿದ್ದಾರೆ. ಜಾಲತಾಣದಲ್ಲಿ ಕಮೆಂಟ್ ಮಾಡಿದ ಹಿಂದುಗಳನ್ನೆಲ್ಲ ಹುಡುಕಿ ಅರೆಸ್ಟ್ ಮಾಡುತ್ತಿದ್ದಾರೆ. ಮುಸ್ಲಿಮರನ್ನು ಯಾಕೆ ಬಂಧನ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಕುಡುಪುವಿನಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಯಾವುದೇ ಸಾಕ್ಷಿ ಇಲ್ಲದಿದ್ದರೂ ಪೊಲೀಸರು 22 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ಸುಹಾಸ್ ಕೊಲೆ ಕೃತ್ಯದಲ್ಲಿ ಅನೇಕ ಸಾಕ್ಷಿಗಳಿದ್ದರೂ ಎಂಟು ಮಂದಿಯನ್ನು ಮಾತ್ರ ಬಂಧಿಸಿದ್ದು ಯಾಕೆ. ಹಣಕಾಸು ನೆರವು ನೀಡಿದವರು, ಸಪೋರ್ಟ್ ಮಾಡಿದವರು ಹೀಗೆ ಎಲ್ಲರನ್ನೂ ಬಂಧನ ಮಾಡಬೇಕಿತ್ತಲ್ವಾ.. ಕಾಂಗ್ರೆಸ್ ನಾಯಕರು ಹೇಳಿದಂತೆ ಪೊಲೀಸರು ಮಾಡುತ್ತಿದ್ದಾರೆಯೇ ಎಂದು ಕೇಳಿದ ಅವರು, ಬಿಜೆಪಿಯವರು ಸುಹಾಸ್ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಪಕ್ಷದಿಂದ ಜುಜುಬಿ 25 ಲಕ್ಷ ಕೊಟ್ಟು ರಾಜಕೀಯ ಲಾಭಕ್ಕೆ ನೋಡುತ್ತಿದ್ದಾರೆ. ಇವರ ನಾಯಕರು ಕೋಟಿಗಟ್ಟಲೆ ಮಾಡಿಲ್ವಾ.. ಎಂದು ಪ್ರಶ್ನಿಸಿದರು.
ಸುಹಾಸ್ ಕೊಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಕೈವಾಡ ಇದೆ, ಬಿಜೆಪಿಗೆ ಹಿಂದುತ್ವ ಕೇವಲ ರಾಜಕೀಯಕ್ಕೆ ಮಾತ್ರ. ಎರಡೂ ಪಕ್ಷಗಳು ರಾಜಕೀಯ ಲಾಭಕ್ಕೆ ನೋಡುತ್ತಿದ್ದಾರೆ ಎಂದು ಹೇಳಿದರು.
At a press meet in Mangalore, Hindu Maha Sabha leader Rajesh Pavitran claimed that both BJP and Congress leaders were complicit in the murder of Suhas Shetty, and accused police of failing to conduct a proper investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm