ಬ್ರೇಕಿಂಗ್ ನ್ಯೂಸ್
07-05-25 10:30 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಮುಸ್ಲಿಮರ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದು ಕೇಸಿಗೆ ತಡೆ ಕೋರಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನ ಎಸ್.ಬಿ.ಇಬ್ರಾಹಿಂ ಸಲ್ಲಿಸಿರುವ ದೂರಿನಂತೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಬೇಡಿಕೆ ಇಟ್ಟರು. ಇದಕ್ಕೆ ಹೈಕೋರ್ಟ್ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಒಪ್ಪಿಗೆ ಸಿಕ್ಕಿದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ವಿಚಾರಣೆ ಮುಂದೂಡಿದರು.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಮೇ 3ರಂದು ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ "ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್ನ ಡೀಸೆಲ್ ಕದ್ದಿದ್ದಾರೆ ಎಂಬ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿದೆ. ಬ್ರಹ್ಮಕಲಶೋತ್ಸವ ಮುಗಿಯುವ ವೇಳೆಗೆ ಕದ್ದಿರುವವರು ಯಾರು ಎಂಬ ಮಾಹಿತಿ ಬರುತ್ತದೆ. ನಮ್ಮಲ್ಲಿ ಸೌಹಾರ್ದತೆ ಬೇಕು. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಬಾರದಿತ್ತು. ಕಾರ್ಯಕ್ರಮಕ್ಕೆ ಕರೆಯಬಾರದಿತ್ತು" ಎಂದು ಹೇಳಿದ್ದರು.
ಇಂತಹ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ಎಸ್.ಬಿ. ಇಬ್ರಾಹಿಂ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಹರೀಶ್ ಪೂಂಜಾ ವಿರುದ್ಧ ಬಿಎನ್ಎಸ್ ಸೆಕ್ಷನ್ 196, 353(2) ಅಡಿ ಪ್ರಕರಣ ದಾಖಲಿಸಿದ್ದಾರೆ.
MLA Harish Poonja Moves High Court Seeking Quashing of FIR Over Alleged Derogatory Remarks Against Muslims.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm