ಬ್ರೇಕಿಂಗ್ ನ್ಯೂಸ್
07-05-25 10:30 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಮುಸ್ಲಿಮರ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದು ಕೇಸಿಗೆ ತಡೆ ಕೋರಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನ ಎಸ್.ಬಿ.ಇಬ್ರಾಹಿಂ ಸಲ್ಲಿಸಿರುವ ದೂರಿನಂತೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಬೇಡಿಕೆ ಇಟ್ಟರು. ಇದಕ್ಕೆ ಹೈಕೋರ್ಟ್ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಒಪ್ಪಿಗೆ ಸಿಕ್ಕಿದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ವಿಚಾರಣೆ ಮುಂದೂಡಿದರು.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಮೇ 3ರಂದು ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ "ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್ನ ಡೀಸೆಲ್ ಕದ್ದಿದ್ದಾರೆ ಎಂಬ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿದೆ. ಬ್ರಹ್ಮಕಲಶೋತ್ಸವ ಮುಗಿಯುವ ವೇಳೆಗೆ ಕದ್ದಿರುವವರು ಯಾರು ಎಂಬ ಮಾಹಿತಿ ಬರುತ್ತದೆ. ನಮ್ಮಲ್ಲಿ ಸೌಹಾರ್ದತೆ ಬೇಕು. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಬಾರದಿತ್ತು. ಕಾರ್ಯಕ್ರಮಕ್ಕೆ ಕರೆಯಬಾರದಿತ್ತು" ಎಂದು ಹೇಳಿದ್ದರು.
ಇಂತಹ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ಎಸ್.ಬಿ. ಇಬ್ರಾಹಿಂ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಹರೀಶ್ ಪೂಂಜಾ ವಿರುದ್ಧ ಬಿಎನ್ಎಸ್ ಸೆಕ್ಷನ್ 196, 353(2) ಅಡಿ ಪ್ರಕರಣ ದಾಖಲಿಸಿದ್ದಾರೆ.
MLA Harish Poonja Moves High Court Seeking Quashing of FIR Over Alleged Derogatory Remarks Against Muslims.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm