ಬ್ರೇಕಿಂಗ್ ನ್ಯೂಸ್
14-05-25 06:33 pm Mangalore Correspondent ಕರಾವಳಿ
ಮಂಗಳೂರು, ಮೇ 14 : ಗ್ರಾಪಂ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿಗೊಂಡು ಮೃತಪಟ್ಟಿದ್ದ ತನ್ನ ಗಂಡನ ಪಿಂಚಣಿ ಮೊತ್ತವನ್ನು ಕೇಳಲು ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಒಡ್ಡಿದ್ದ ಬಂಟ್ವಾಳ ತಾಲೂಕಿನ ಇಬ್ಬರು ಕಂದಾಯ ಇಲಾಖೆ ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ದೂರುದಾರ ಮಹಿಳೆಯ ಗಂಡ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ನಿವೃತ್ತಿ ಹೊಂದಿದ್ದರು. ಆನಂತರ, 2024ರ ಜೂನ್ ತಿಂಗಳಿನಲ್ಲಿ ಅವರು ದಿಢೀರ್ ಮೃತಪಟ್ಟಿದ್ದರು. ಗಂಡನ ಹೆಸರಿಗೆ ಬರುತ್ತಿದ್ದ ಪಿಂಚಣಿ ಮೊತ್ತವನ್ನು ತನ್ನ ಹೆಸರಿಗೆ ಮಾಡಿಸಲು ಮಹಿಳೆ ಬಂಟ್ವಾಳ ತಾಲೂಕು ಕಂದಾಯ ಇಲಾಖೆ ಮುಖ್ಯ ಲೆಕ್ಕಿಗ ಭಾಸ್ಕರ್ ಎಂಬವರ ಬಳಿಗೆ ತೆರಳಿದ್ದರು. ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರಲಿಲ್ಲ. ಇತ್ತೀಚೆಗೆ ಮಹಿಳೆಯ ಖಾತೆಗೆ ಗಂಡನ ಪಿಂಚಣಿ ಮೊತ್ತ ಜಮೆ ಮಾಡಿಸಿದ್ದು ಪ್ರತಿಯಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್. ಎಂಬವರು ತಲಾ 5 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಇದರಿಂದ ನೊಂದ ಮಹಿಳೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರಂತೆ, ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಲಂಚದ ಹಣ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ಬಂಧಿಸಿದ್ದಾರೆ.
Mangalore The Karnataka Lokayukta, Mangaluru division, has taken into custody two officials from the Bantwal taluk treasury office after they were caught red-handed accepting a bribe from a complainant. The complainant’s husband, who was working as a secretary in a gram panchayat under Bantwal taluk, had retired in October 2023. He
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
12-07-25 02:15 pm
HK News Desk
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
12-07-25 01:42 pm
Mangalore Correspondent
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
12-07-25 01:32 pm
HK News Desk
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm