ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm