ಬ್ರೇಕಿಂಗ್ ನ್ಯೂಸ್
15-05-25 06:36 pm Mangalore Correspondent ಕರಾವಳಿ
ಮಂಗಳೂರು, ಮೇ 15 : ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ನಾಶವಾಗಿದ್ದ ಉಗ್ರ ತರಬೇತಿ ಕೇಂದ್ರಗಳನ್ನು ಸರ್ಕಾರಿ ವೆಚ್ಚದಲ್ಲಿಯೇ ಮರು ನಿರ್ಮಾಣ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಪ್ರತಿಜ್ಞೆ ಮಾಡಿದೆ.
ಭಾರತದ ಸೇನೆ ಪಾಕಿಸ್ತಾನದ 9 ಸ್ಥಳಗಳ ಮೇಲೆ ಕಾರ್ಯಾಚರಣೆ ನಡೆಸಿ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿತ್ತು. ಈ ವೇಳೆ 100ಕ್ಕೂ ಅಧಿಕ ಉಗ್ರರು ಹತರಾಗಿದ್ದರು. ಕಾರ್ಯಾಚರಣೆ ಬಳಿಕ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ಸಂಘರ್ಷ ಉಂಟಾಗಿತ್ತು. ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿದ್ದವು.
ಏತನ್ಮಧ್ಯೆ ಪಾಕಿಸ್ತಾನದ ಫೆಡರಲ್ ಸಚಿವ ರಾಣಾ ತನ್ವೀರ್ ಹುಸೈನ್ ಮೇ 14ರಂದು ಲಷ್ಕರ್ ಉಗ್ರರ ಕೇಂದ್ರ ಸ್ಥಾನ ಭಾರತದ ದಾಳಿಗೀಡಾಗಿದ್ದ ಮುರಿಡ್ಕೆ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ಥರನ್ನು ಭೇಟಿ ಮಾಡಿದ್ದ ಅವರು, 'ಪಾಕ್ ಸರ್ಕಾರ ಸ್ವಂತ ಖರ್ಚಿನಲ್ಲಿ ಈ ಪ್ರದೇಶವನ್ನು ಪುನರ್ ನಿರ್ಮಿಸಲು ಪ್ರಧಾನಿ ಪರವಾಗಿ ಆಶ್ವಾಸನೆ ನೀಡುವುದಾಗಿ ಹೇಳಿದ್ದಾರೆ. ಆಮೂಲಕ ಉಗ್ರ ಸಂಘಟನೆಗಳಿಗೆ ಸರ್ಕಾರ ನೆರವು ನೀಡಲಿದೆ ಎಂದು ಬಹಿರಂಗವಾಗಿಯೇ ಘೋಷಣೆ ಮಾಡಿದ್ದಾರೆ. ಇದಲ್ಲದೆ, ಧ್ವಂಸಗೊಂಡ ಮಸೀದಿ, ಕಟ್ಟಡಗಳ ಪುನರ್ ನಿರ್ಮಾಣಕ್ಕೆ ಪಾಕ್ ಪ್ರಧಾನಮಂತ್ರಿ ಶೆಹಬಾಝ್ ಶರೀಫ್ ಮತ್ತು ಸೇನಾ ವರಿಷ್ಠ ಅಸೀಮ್ ಮುನೀರ್ ಆರ್ಥಿಕ ನೆರವನ್ನೂ ನೀಡಲಿದ್ದಾರೆ ಎಂದು ರಾಣಾ ತಿಳಿಸಿದ್ದಾರೆ.
ಲಾಹೋರ್ ನಿಂದ 33 ಕಿಲೋ ಮೀಟರ್ ದೂರದಲ್ಲಿರುವ ಮುರಿಡ್ಕೆಯ ಐತಿಹಾಸಿಕ ಗ್ರ್ಯಾಂಡ್ ಟ್ರಂಕ್ ರಸ್ತೆಯಲ್ಲಿ ಉಗ್ರವಾದಿ ಸಂಘಟನೆ ಲಷ್ಕರ್ ಇ- ತೊಯ್ಬಾದ ಪ್ರಧಾನ ಕಚೇರಿ ಇದ್ದು, ಇದನ್ನು ಮರ್ಕಝ್ ಇ- ತೊಯ್ಬಾ ಎಂದೂ ಕರೆಯಲಾಗುತ್ತದೆ.
Rebuilt Lashkar Terror HQ at Government Expense, Pakistani Minister Takes Oath in Muridke
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm