ಬ್ರೇಕಿಂಗ್ ನ್ಯೂಸ್
16-05-25 10:06 am Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಸಮುದ್ರ ಮಧ್ಯೆ ಮುಳುಗಡೆಯಾಗಿದ್ದು ಅದರಲ್ಲಿದ್ದ ಸಿಬ್ಬಂದಿಯನ್ನು ಲಕ್ಷದ್ವೀಪದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಮೇ 12ರಂದು ಲಕ್ಷದ್ವೀಪ ಹೊರಟಿದ್ದ ಸರಕು ಹಡಗು ಅಲ್ಲಿಂದ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿದ್ದಾಗ ಮುಳುಗಡೆಯಾಗಿತ್ತು. ಹಡಗಿನಲ್ಲಿದ್ದ ತುರ್ತು ರಕ್ಷಣಾ ನೌಕೆಯ ಮೂಲಕ ಪಾರಾಗಿದ್ದು ಬಳಿಕ ಸ್ಥಳೀಯ ಮೀನುಗಾರರು ಮತ್ತು ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿ, ಮೇ 18ರಂದು ಆರು ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು ಬಂದರಿನಿಂದ ಸಿಮೆಂಟ್, ಮರಳು, ತರಕಾರಿ ಹಾಗೂ ನಿರ್ಮಾಣ ಸಾಮಗ್ರಿ ಹೊತ್ತು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ.
ಹಡಗು ಮುಳುಗಿದ್ದರಿಂದ ಸಿಬ್ಬಂದಿ ಮೂರು ದಿನಗಳ ಕಾಲ ಸಮುದ್ರದಲ್ಲಿ ಆಹಾರವಿಲ್ಲದೇ ಕಳೆದಿದ್ದರು. ಕಲ್ಪೇಣಿ ದ್ವೀಪದ ಮೀನುಗಾರರು ಸಮುದ್ರದಲ್ಲಿ ಸಿಲುಕಿದ್ದ ಹಡಗಿನ ಕ್ಯಾಪ್ಟನ್ ಭಾಸ್ಕರನ್ ಹಾಗೂ ಸಿಬ್ಬಂದಿಯಾದ ನಾಗಲಿಂಗಂ, ನಲ್ಲಮುತ್ತು ಗೋಪಾಳ್, ಮಂಡಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್ ಎಸ್., ಕುಪ್ಪುರಾಮನ್, ಎಂ.ಮುರುಗನ್ ಅವರನ್ನು ರಕ್ಷಣೆ ಮಾಡಿದ್ದರು. ಪಾತಿಯನ್ನು ತಮ್ಮ ಮೀನುಗಾರಿಕಾ ದೋಣಿಯ ಮೂಲಕ ಕಲ್ಪೇಣಿ ದ್ವೀಪಕ್ಕೆ ಕರೆದೊಯ್ದು ಕರಾವಳಿ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದರು. ರಕ್ಷಣೆ ಮಾಡಲಾದ ಸಿಬ್ಬಂದಿಯನ್ನು ಕರಾವಳಿ ರಕ್ಷಣಾ ಪಡೆಯ ಕೊಚ್ಚಿ ನೆಲೆಗೆ ಕರೆದೊಯ್ಯಲಾಗಿದೆ’ ಎಂದು ಮಂಗಳೂರಿನ ಬಂದರು ದಕ್ಕೆಯ ಲತೀಫ್ ಬೆಂಗರೆ ತಿಳಿಸಿದ್ದಾರೆ.
‘ಹಡಗು ಮುಳುಗಿದ ಬಗ್ಗೆ ಮಂಗಳೂರು ಮತ್ತು ಲಕ್ಷದ್ವೀಪದ ಕರಾವಳಿ ರಕ್ಷಣಾ ಪಡೆಗೆ ಸಂತ್ರಸ್ತ ಮೀನುಗಾರರು ಮಾಹಿತಿ ನೀಡಿದ್ದರು. ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಕಡಲಿನಲ್ಲಿ ಸಿಲುಕಿದ್ದ ಸಿಬ್ಬಂದಿಗಾಗಿ ಮೇ 15ರಿಂದ 17ರ ವರೆಗೆ ಹುಡುಕಾಟ ನಡೆಸಿದ್ದರು. ಆದರೂ ಅವರು ಪತ್ತೆಯಾಗಿರಲಿಲ್ಲ’ ಎಂದರು.
Mangalore Cargo Ship Bound for Lakshadweep Sinks; Fishermen Rescue Crew After 3 Days Without Food or Water.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm