ಬ್ರೇಕಿಂಗ್ ನ್ಯೂಸ್
16-05-25 02:47 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಪಾಕಿಸ್ತಾನ ವಿಷಯದಲ್ಲಿ ಸರ್ವ ಪಕ್ಷದ ಸಭೆ ಕರೆದು ಮೋದಿಯವರು ಜನರ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಡಲಿ. ಮೋದಿ ಹೇಳಿದ್ದೆಲ್ಲ ವೇದ ವಾಕ್ಯ ಎಂದು ನಾವು ನಂಬಬೇಕಾ? ಇಡಿ ದೇಶದಲ್ಲಿ ಅತೀ ದೊಡ್ಡ ಸುಳ್ಳುಗಾರ ಮೋದಿ. ಸುಳ್ಳಿನ ಆಧಾರದಲ್ಲಿ ದಂತ ಕತೆ ಹೇಳೋದ್ರಲ್ಲಿ ಮೋದಿ ನಿಸ್ಸೀಮ. ಹೀಗೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಟುವಾಗಿ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್, ಶಾಸಕರೇನೋ ಹೇಳುತ್ತಾರೆ ಆದ್ರೆ ಇವತ್ತು ಇಡೀ ದೇಶವೇ ಪ್ರಶ್ನೆ ಮಾಡುತ್ತಿದೆ. ದೇಶದ ಜನರು ಪಾಕ್ ವಿಷಯದಲ್ಲಿ ಸ್ಪಷ್ಟ ಉತ್ತರ ಬಯಸುತ್ತಿದ್ದಾರೆ. ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್ ಘೋಷಣೆ ಮಾಡಿದ್ದು ಸತ್ಯ, ಆನಂತರವೇ ಕದನ ವಿರಾಮ ಘೋಷಣೆ ಆದದ್ದೂ ಸತ್ಯ. ಟ್ರಂಪ್ ಹೇಳಿದ್ದು ಹಾಗಾದ್ರೆ ಸುಳ್ಳಾ? ಕದನ ವಿರಾಮ ಆಗಿದ್ದು ಪ್ರಪಂಚಕ್ಕೆ ಗೊತ್ತಾಗಿದ್ದು ಟ್ರಂಪ್ ಹೇಳಿದ ಮೇಲೆ. ನಂತರ ಪಾಕಿಸ್ತಾನ ಹಾಗೂ ನಮ್ಮ ದೇಶವೂ ಹೇಳಿತು. ಆದರೆ ಅವಾಗಲೇ ನಮ್ಮ ದೇಶದವರು ಹೇಳಬೇಕಿತ್ತು.
ಈ ಬಗ್ಗೆ ಪ್ರಧಾನಿ ಏನು ಹೇಳುತ್ತಾರೋ ಅದನ್ನು ನಾವು ಬಯಸುತ್ತಿದ್ದೇವೆ. ಟ್ರಂಪ್ ಅಂತ ಹೆಸರು ಹೇಳುವುದಕ್ಕೆ ಮೋದಿ ಭಯ ಪಡುತ್ತಾರೆ. 56 ಇಂಚು ಎದೆ ಇರುವ ಮೋದಿ ಟರ್ಕಿ, ಅಜರ್ ಬೈಜಾನ್ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ಚೀನಾ ವೆಪನ್ ಪಾಕಿಸ್ತಾನ ಯೂಸ್ ಮಾಡುತ್ತೆ, ಚೈನಾ ಬಗ್ಗೆ ಮಾತಾಡಲ್ಲ. ಅಜರ್ ಬೈಜಾನ್ ಹಾಗೂ ಟರ್ಕಿ ಜೊತೆ ವ್ಯಾಪಾರ ನಿಲ್ಲಿಸುತ್ತಾರೆನ್ನುವ ಮೋದಿ, ಚೀನಾ, ಅಮೆರಿಕ ಬಗ್ಗೆ ಮಾತಾಡಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ನವರೇನೂ ದೇಶದ ಸೈನ್ಯವನ್ನ ಟೀಕೆ ಮಾಡುತ್ತಿಲ್ಲ. ಬಿಜೆಪಿಯ ಮಂತ್ರಿಯೊಬ್ಬರು ಕರ್ನಲ್ ಸೋಫಿಯ ಖುರೇಷಿ ಬಗ್ಗೆ ಮಾತನಾಡಿದ್ದನ್ನ ನೋಡಿ. ಕೋರ್ಟ್ ನಿಂದ ಎಫ್ ಐ ಆರ್ ಆಗೋ ಸನ್ನಿವೇಶ ಬಂದಿದೆ. ಪಹಾಲ್ಗಮ್ ನಲ್ಲಿ ಗಂಡಂದಿರನ್ನ ಕಳೆದುಕೊಂಡವರೇ ಇದನ್ನ ಹಿಂದೂ ಮುಸ್ಲಿಂ ಮಾಡಬೇಡಿ ಎಂದಿದ್ದಾರೆ. ಬಿಜೆಪಿಯ ಕಾರ್ಯಕರ್ತರಿಗೆ ಕೇವಲ ಈ ಪ್ರಕರಣವನ್ನ ಹಿಂದೂ ಮುಸ್ಲಿಂ ಮಾಡಬೇಕು. ಬಿಜೆಪಿ ಕಾರ್ಯಕರ್ತರು ನಮ್ಮ ವಿದೇಶಾಂಗ ಕಾರ್ಯದರ್ಶಿ ಮಗಳಿಗೆ ಏನೆಲ್ಲ ಟೀಕೆ ಮಾಡಿದ್ರು.ಕದನ ವಿರಾಮ ಘೋಷಣೆ ಮಾಡಿದ ಪ್ರಧಾನಿಯನ್ನ ಟ್ರೋಲ್ ಮಾಡಬೇಕಿತ್ತು. ಪ್ರಧಾನಿಯವರ ಒಪ್ಪಿಗೆ ಇಲ್ಲದೆ ಕದನ ವಿರಾಮ ಘೋಷಣೆ ಮಾಡಲು ಸಾಧ್ಯವಿಲ್ಲ.
ಪಾಕಿಸ್ತಾನ ಜೊತೆಗಿನ ಕದನ ವಿರಾಮದ ಬಗ್ಗೆ ದೇಶಕ್ಕೆ ಸ್ಪಷ್ಟವಾದ ವಿಚಾರವನ್ನ ಮೋದಿಯವರು ಹೇಳಬೇಕು. ಪಾಕಿಸ್ತಾನದವರು ನಮ್ಮ 5 ಜೆಟ್ ಗಳನ್ನ ಹೊಡೆದು ಹಾಕಿದ್ದೇವೆ ಎಂದಿದ್ದಾರೆ. ಇದಕ್ಕೆ ಉತ್ತರ ಕೊಡೋದಕ್ಕೆ ಮೋದಿ ಯಾಕೆ ತಯಾರಿಲ್ಲ. ಪೆಹಾಲ್ಗಮ್ ನಲ್ಲಿ ನರಮೇಧ ಮಾಡಿದವರನ್ನ ಹುಡುಕಿ ಮಣ್ಣುಪಾಲು ಮಾಡುತ್ತೇವೆ ಎಂದ್ರು. ಹಾಗಾಗಿ ನಾವೆಲ್ಲಾ ಪ್ರಧಾನಿಗಳ ಜೊತೆ ನಿಂತುಕೊಂಡೆವು. ಇವರು ಸುಳ್ಳನ್ನೇ ಹೇಳಿಕೊಂಡು ಬಂದರು.
ಟ್ರಂಪ್ 20 ಸಲ ಮೀಡಿಯಾ ಮುಂದೆ ಬರುತ್ತಾರೆ, ಪತ್ರಕರ್ತರ ಪ್ರಶ್ನೆಗೆ ಉತ್ತರ ಕೊಡುತ್ತಾರೆ. ಆದರೆ ನಮ್ಮ ಪ್ರಧಾನಿಗಳಿಗೆ ಯಾರು ಪ್ರಶ್ನೆಗಳನ್ನ ಕೇಳೋಕೆ ಆಗೋದಿಲ್ಲ. ಅವರಿಗೆ ಪತ್ರಕರ್ತರು ಎಂದರೆ ಕ್ಯಾರೇ ಇಲ್ಲ. ಗೋಧಿ ಮೀಡಿಯಾ ಬಗ್ಗೆ ಮೋದಿ ಕಿಂಚಿತ್ತೂ ಕ್ಯಾರೆ ಮಾಡೋಲ್ಲ. ನಮಗೆ ನಂಬಿಕೆ ಬರೋ ತರ ಉತ್ತರ ನೀಡಲಿ. ಅಧಿವೇಶನ ಕರೀಲಿ ಎಂದು ನಮ್ಮ ಮುಖಂಡರು ಹೇಳಿದ್ದಾರೆ, ಅದನ್ನ ಮೊದಲು ಮಾಡಲಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Mangalore Why Is Modi Silent on China and Trump While Criticizing Turkey ? Should We Accept Everything He Says as Gospel Truth.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm