ಬ್ರೇಕಿಂಗ್ ನ್ಯೂಸ್
16-05-25 02:47 pm Mangalore Correspondent ಕರಾವಳಿ
ಮಂಗಳೂರು, ಮೇ 16 : ಪಾಕಿಸ್ತಾನ ವಿಷಯದಲ್ಲಿ ಸರ್ವ ಪಕ್ಷದ ಸಭೆ ಕರೆದು ಮೋದಿಯವರು ಜನರ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಡಲಿ. ಮೋದಿ ಹೇಳಿದ್ದೆಲ್ಲ ವೇದ ವಾಕ್ಯ ಎಂದು ನಾವು ನಂಬಬೇಕಾ? ಇಡಿ ದೇಶದಲ್ಲಿ ಅತೀ ದೊಡ್ಡ ಸುಳ್ಳುಗಾರ ಮೋದಿ. ಸುಳ್ಳಿನ ಆಧಾರದಲ್ಲಿ ದಂತ ಕತೆ ಹೇಳೋದ್ರಲ್ಲಿ ಮೋದಿ ನಿಸ್ಸೀಮ. ಹೀಗೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಟುವಾಗಿ ಟೀಕಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್, ಶಾಸಕರೇನೋ ಹೇಳುತ್ತಾರೆ ಆದ್ರೆ ಇವತ್ತು ಇಡೀ ದೇಶವೇ ಪ್ರಶ್ನೆ ಮಾಡುತ್ತಿದೆ. ದೇಶದ ಜನರು ಪಾಕ್ ವಿಷಯದಲ್ಲಿ ಸ್ಪಷ್ಟ ಉತ್ತರ ಬಯಸುತ್ತಿದ್ದಾರೆ. ಯುದ್ಧ ನಿಲ್ಲಿಸುವ ಬಗ್ಗೆ ಟ್ರಂಪ್ ಘೋಷಣೆ ಮಾಡಿದ್ದು ಸತ್ಯ, ಆನಂತರವೇ ಕದನ ವಿರಾಮ ಘೋಷಣೆ ಆದದ್ದೂ ಸತ್ಯ. ಟ್ರಂಪ್ ಹೇಳಿದ್ದು ಹಾಗಾದ್ರೆ ಸುಳ್ಳಾ? ಕದನ ವಿರಾಮ ಆಗಿದ್ದು ಪ್ರಪಂಚಕ್ಕೆ ಗೊತ್ತಾಗಿದ್ದು ಟ್ರಂಪ್ ಹೇಳಿದ ಮೇಲೆ. ನಂತರ ಪಾಕಿಸ್ತಾನ ಹಾಗೂ ನಮ್ಮ ದೇಶವೂ ಹೇಳಿತು. ಆದರೆ ಅವಾಗಲೇ ನಮ್ಮ ದೇಶದವರು ಹೇಳಬೇಕಿತ್ತು.
ಈ ಬಗ್ಗೆ ಪ್ರಧಾನಿ ಏನು ಹೇಳುತ್ತಾರೋ ಅದನ್ನು ನಾವು ಬಯಸುತ್ತಿದ್ದೇವೆ. ಟ್ರಂಪ್ ಅಂತ ಹೆಸರು ಹೇಳುವುದಕ್ಕೆ ಮೋದಿ ಭಯ ಪಡುತ್ತಾರೆ. 56 ಇಂಚು ಎದೆ ಇರುವ ಮೋದಿ ಟರ್ಕಿ, ಅಜರ್ ಬೈಜಾನ್ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ಚೀನಾ ವೆಪನ್ ಪಾಕಿಸ್ತಾನ ಯೂಸ್ ಮಾಡುತ್ತೆ, ಚೈನಾ ಬಗ್ಗೆ ಮಾತಾಡಲ್ಲ. ಅಜರ್ ಬೈಜಾನ್ ಹಾಗೂ ಟರ್ಕಿ ಜೊತೆ ವ್ಯಾಪಾರ ನಿಲ್ಲಿಸುತ್ತಾರೆನ್ನುವ ಮೋದಿ, ಚೀನಾ, ಅಮೆರಿಕ ಬಗ್ಗೆ ಮಾತಾಡಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ನವರೇನೂ ದೇಶದ ಸೈನ್ಯವನ್ನ ಟೀಕೆ ಮಾಡುತ್ತಿಲ್ಲ. ಬಿಜೆಪಿಯ ಮಂತ್ರಿಯೊಬ್ಬರು ಕರ್ನಲ್ ಸೋಫಿಯ ಖುರೇಷಿ ಬಗ್ಗೆ ಮಾತನಾಡಿದ್ದನ್ನ ನೋಡಿ. ಕೋರ್ಟ್ ನಿಂದ ಎಫ್ ಐ ಆರ್ ಆಗೋ ಸನ್ನಿವೇಶ ಬಂದಿದೆ. ಪಹಾಲ್ಗಮ್ ನಲ್ಲಿ ಗಂಡಂದಿರನ್ನ ಕಳೆದುಕೊಂಡವರೇ ಇದನ್ನ ಹಿಂದೂ ಮುಸ್ಲಿಂ ಮಾಡಬೇಡಿ ಎಂದಿದ್ದಾರೆ. ಬಿಜೆಪಿಯ ಕಾರ್ಯಕರ್ತರಿಗೆ ಕೇವಲ ಈ ಪ್ರಕರಣವನ್ನ ಹಿಂದೂ ಮುಸ್ಲಿಂ ಮಾಡಬೇಕು. ಬಿಜೆಪಿ ಕಾರ್ಯಕರ್ತರು ನಮ್ಮ ವಿದೇಶಾಂಗ ಕಾರ್ಯದರ್ಶಿ ಮಗಳಿಗೆ ಏನೆಲ್ಲ ಟೀಕೆ ಮಾಡಿದ್ರು.ಕದನ ವಿರಾಮ ಘೋಷಣೆ ಮಾಡಿದ ಪ್ರಧಾನಿಯನ್ನ ಟ್ರೋಲ್ ಮಾಡಬೇಕಿತ್ತು. ಪ್ರಧಾನಿಯವರ ಒಪ್ಪಿಗೆ ಇಲ್ಲದೆ ಕದನ ವಿರಾಮ ಘೋಷಣೆ ಮಾಡಲು ಸಾಧ್ಯವಿಲ್ಲ.
ಪಾಕಿಸ್ತಾನ ಜೊತೆಗಿನ ಕದನ ವಿರಾಮದ ಬಗ್ಗೆ ದೇಶಕ್ಕೆ ಸ್ಪಷ್ಟವಾದ ವಿಚಾರವನ್ನ ಮೋದಿಯವರು ಹೇಳಬೇಕು. ಪಾಕಿಸ್ತಾನದವರು ನಮ್ಮ 5 ಜೆಟ್ ಗಳನ್ನ ಹೊಡೆದು ಹಾಕಿದ್ದೇವೆ ಎಂದಿದ್ದಾರೆ. ಇದಕ್ಕೆ ಉತ್ತರ ಕೊಡೋದಕ್ಕೆ ಮೋದಿ ಯಾಕೆ ತಯಾರಿಲ್ಲ. ಪೆಹಾಲ್ಗಮ್ ನಲ್ಲಿ ನರಮೇಧ ಮಾಡಿದವರನ್ನ ಹುಡುಕಿ ಮಣ್ಣುಪಾಲು ಮಾಡುತ್ತೇವೆ ಎಂದ್ರು. ಹಾಗಾಗಿ ನಾವೆಲ್ಲಾ ಪ್ರಧಾನಿಗಳ ಜೊತೆ ನಿಂತುಕೊಂಡೆವು. ಇವರು ಸುಳ್ಳನ್ನೇ ಹೇಳಿಕೊಂಡು ಬಂದರು.
ಟ್ರಂಪ್ 20 ಸಲ ಮೀಡಿಯಾ ಮುಂದೆ ಬರುತ್ತಾರೆ, ಪತ್ರಕರ್ತರ ಪ್ರಶ್ನೆಗೆ ಉತ್ತರ ಕೊಡುತ್ತಾರೆ. ಆದರೆ ನಮ್ಮ ಪ್ರಧಾನಿಗಳಿಗೆ ಯಾರು ಪ್ರಶ್ನೆಗಳನ್ನ ಕೇಳೋಕೆ ಆಗೋದಿಲ್ಲ. ಅವರಿಗೆ ಪತ್ರಕರ್ತರು ಎಂದರೆ ಕ್ಯಾರೇ ಇಲ್ಲ. ಗೋಧಿ ಮೀಡಿಯಾ ಬಗ್ಗೆ ಮೋದಿ ಕಿಂಚಿತ್ತೂ ಕ್ಯಾರೆ ಮಾಡೋಲ್ಲ. ನಮಗೆ ನಂಬಿಕೆ ಬರೋ ತರ ಉತ್ತರ ನೀಡಲಿ. ಅಧಿವೇಶನ ಕರೀಲಿ ಎಂದು ನಮ್ಮ ಮುಖಂಡರು ಹೇಳಿದ್ದಾರೆ, ಅದನ್ನ ಮೊದಲು ಮಾಡಲಿ ಎಂದು ದಿನೇಶ್ ಗುಂಡೂರಾವ್ ಹೇಳಿದರು.
Mangalore Why Is Modi Silent on China and Trump While Criticizing Turkey ? Should We Accept Everything He Says as Gospel Truth.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm