ಬ್ರೇಕಿಂಗ್ ನ್ಯೂಸ್
17-05-25 01:01 pm Mangalore Correspondent ಕರಾವಳಿ
ಮಂಗಳೂರು, ಮೇ.17: ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು, ಕಾರವಾರ ನಡುವೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025ರ ವರೆಗೆ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಜೂನ್ನಿಂದ ನವೆಂಬರ್ ವರೆಗೆ ಎಂದರೆ ಒಟ್ಟು ಆರು ತಿಂಗಳ ಕಾಲ ರೈಲು ಸಂಚಾರ ಇರುವುದಿಲ್ಲ.
ಮೇ 31 ರಿಂದ 2025ರ ನವೆಂಬರ್ 1 ವರೆಗೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಸಂಚರಿಸುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು ಆಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2ರ ವರೆಗೆ ಪ್ರತಿ ಭಾನುವಾರ ಮಂಗಳೂರಿನಿಂದ ಯಶವಂತಪುರಕ್ಕೆ ತೆರಳುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಕೂಡ ಇರುವುದಿಲ್ಲ.
ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರದಿಂದ ಮಂಗಳೂರು ಜಂಕ್ಷನ್ ವರೆಗೆ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು ಆಗಲಿದೆ. ಇದರ ಜೊತೆಗೆ ಜೂನ್ 2ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದು ಆಗಲಿದೆ.
ಜೂನ್ 2 ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಗೆ ತೆರಳುವ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಸಂಚಾರ ಇರುವುದಿಲ್ಲ. ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Sakleshpur Subrahmanya Railway Electrification, Daytime Bengaluru Mangaluru Karwar Trains Cancelled for Six Months from June 1.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm