ಬ್ರೇಕಿಂಗ್ ನ್ಯೂಸ್
17-05-25 01:01 pm Mangalore Correspondent ಕರಾವಳಿ
ಮಂಗಳೂರು, ಮೇ.17: ಸಕಲೇಶಪುರ- ಸುಬ್ರಹ್ಮಣ್ಯ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು, ಕಾರವಾರ ನಡುವೆ ಸಂಚರಿಸುವ ರೈಲುಗಳನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025ರ ವರೆಗೆ ರೈಲ್ವೇ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ಮಂಗಳೂರು - ಬೆಂಗಳೂರು ನಡುವಿನ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ. ಜೂನ್ನಿಂದ ನವೆಂಬರ್ ವರೆಗೆ ಎಂದರೆ ಒಟ್ಟು ಆರು ತಿಂಗಳ ಕಾಲ ರೈಲು ಸಂಚಾರ ಇರುವುದಿಲ್ಲ.
ಮೇ 31 ರಿಂದ 2025ರ ನವೆಂಬರ್ 1 ವರೆಗೆ ಪ್ರತಿ ಶನಿವಾರ ಬೆಂಗಳೂರಿನ ಯಶವಂತಪುರದಿಂದ ಮಂಗಳೂರು ಜಂಕ್ಷನ್ಗೆ ಸಂಚರಿಸುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದು ಆಗಲಿದೆ. ಅದೇ ರೀತಿ ಜೂನ್ 1 ರಿಂದ ನವೆಂಬರ್ 2ರ ವರೆಗೆ ಪ್ರತಿ ಭಾನುವಾರ ಮಂಗಳೂರಿನಿಂದ ಯಶವಂತಪುರಕ್ಕೆ ತೆರಳುವ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಕೂಡ ಇರುವುದಿಲ್ಲ.
ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರ ಸಂಚರಿಸುವ ಯಶವಂತಪುರದಿಂದ ಮಂಗಳೂರು ಜಂಕ್ಷನ್ ವರೆಗೆ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದು ಆಗಲಿದೆ. ಇದರ ಜೊತೆಗೆ ಜೂನ್ 2ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು ಸಂಚರಿಸುವ ಮಂಗಳೂರು ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ದು ಆಗಲಿದೆ.
ಜೂನ್ 2 ರಿಂದ ಅಕ್ಟೋಬರ್ 31ರ ವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಗೆ ತೆರಳುವ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಸಂಚಾರ ಇರುವುದಿಲ್ಲ. ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸಂಚರಿಸುವ ಕಾರವಾರ ಟು ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.
Sakleshpur Subrahmanya Railway Electrification, Daytime Bengaluru Mangaluru Karwar Trains Cancelled for Six Months from June 1.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am